Friday, September 20, 2024
Friday, September 20, 2024

ವಿದ್ಯಾರ್ಥಿ ಸಂಸತ್ ಚುನಾವಣೆ

ವಿದ್ಯಾರ್ಥಿ ಸಂಸತ್ ಚುನಾವಣೆ

Date:

ಕುಂದಾಪುರ: ಶಾಸಕ ಬಿ ಎಮ್ ಸುಕುಮಾರ ಶೆಟ್ಟಿ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಮೆಮೋರಿಯಲ್ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಶಾಲಾ ಸಂಸತ್ತಿಗೆ ವಿದ್ಯಾರ್ಥಿ ನಾಯಕರ ಆಯ್ಕೆಗಾಗಿ ಚುನಾವಣೆ ನಡೆಯಿತು.

ಚುನಾವಣೆಯ ಪ್ರತಿಯೊಂದು ಮಜಲುಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಸಲುವಾಗಿ ನೈಜ ಚುನಾವಣಾ ಮಾದರಿಯಲ್ಲಿ ಒಂದು ವಾರದ ಮೊದಲೇ ಆರಂಭವಾದ ಈ ಚುನಾವಣಾ ಪ್ರಕ್ರಿಯೆ, ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ, ಚುನಾವಣಾ ಪ್ರಚಾರ, ಕೊನೆಯ ಹಂತದ ಅಭ್ಯರ್ಥಿಗಳ ಆಯ್ಕೆ ಹೀಗೆ ಅನೇಕ ಹಂತಗಳನ್ನು ಒಳಗೊಂಡಿತ್ತು.

ಬೆರಳಿಗೆ ಶಾಯಿ ಹಾಕಿಸಿಕೊಂಡ ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ತಮ್ಮ ಅಮೂಲ್ಯವಾದ ಮತವನ್ನು ತಮ್ಮ ನೆಚ್ಚಿನ ಅಭ್ಯರ್ಥಿಗೆ ನೀಡುವುದರ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಇವಿಎಂ ಮಾದರಿಯ ಟ್ಯಾಬ್ ಮೂಲಕ ವಿದ್ಯಾರ್ಥಿಗಳು ಕಾಗದರಹಿತ ಮತದಾನ ನಡೆಸಿ ನೈಜ ಚುನಾವಣೆಯ ಅನುಭವ ಪಡೆದರು.

ಮಧ್ಯಾಹ್ನದ ವೇಳೆಯಲ್ಲಿ ನಡೆದ ಮೂರು ಸುತ್ತಿನ ಮತ ಎಣಿಕೆಯಲ್ಲಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ನಾಯಕಿಯಾಗಿ ಸನ್ಮಿತಾ, ಸಹಾಯಕ ವಿದ್ಯಾರ್ಥಿ ನಾಯಕನಾಗಿ ಮಹಮದ್ ಹುಸೈಫ್ ಆಯ್ಕೆಯಾದರೆ, ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕನಾಗಿ ಸಾತ್ವಿಕ್ ಮತ್ತು ಸಹಾಯಕ ವಿದ್ಯಾರ್ಥಿ ನಾಯಕಿಯಾಗಿ ಶ್ರೀದೇವಿ ಆಯ್ಕೆಯಾದರು.

ಸಂಸ್ಥೆಯ ಪ್ರಾಂಶುಪಾಲರಾದ ಚಿಂತನಾ ರಾಜೇಶ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭ ಕೆ ಎನ್, ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್ ರವರ ಮಾರ್ಗದರ್ಶನದಲ್ಲಿ ಇನ್ನಿತರ ಚುನಾವಣಾ ಸಮಿತಿ ಶಿಕ್ಷಕರ ಸಹಯೋಗದೊಂದಿಗೆ ವಿದ್ಯಾರ್ಥಿ ಸಂಸತ್ ಚುನಾವಣೆ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!