Saturday, September 21, 2024
Saturday, September 21, 2024

ಕೋಟ ಪಡುಕರೆ ಕಾಲೇಜಿನಲ್ಲಿ ಲಿಂಗ ಸಮಾನತೆ ಜಾಗೃತಿ ಸಪ್ತಾಹ

ಕೋಟ ಪಡುಕರೆ ಕಾಲೇಜಿನಲ್ಲಿ ಲಿಂಗ ಸಮಾನತೆ ಜಾಗೃತಿ ಸಪ್ತಾಹ

Date:

ಕೋಟ: ಲಿಂಗ ಸಮಾನತೆ ಎಂಬುದು ಮನೆಯಿಂದಲೇ ಆರಂಭಗೊಳ್ಳಬೇಕು. ಪರುಷ-ಮಹಿಳೆ ಎಂಬ ಬೇಧ-ಭಾವವಿಲ್ಲದೆ ಎಲ್ಲರೂ ಜಾಗೃತರಾದಾಗ ಲಿಂಗಸಮಾನತೆಯ ಕನಸು ಸಾಕಾರಗೊಂಡು ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆಂದು ವೈಷ್ಣವಿ ರಕ್ಷಿತ್‌ ಕುಂದರ್ ಇವರು ಲಕ್ಷ್ಮೀ ಸೋಮ ಬಂಗೇರ ಸ.ಪ್ರ.ದ ಕಾಲೇಜಿನ, ಐ.ಕ್ಯೂ.ಎ.ಸಿ ಘಟಕ, ರಾಷ್ಟ್ರ‍ೀಯ ಸೇವಾ ಯೋಜನೆ ಘಟಕ 1 ಮತ್ತು 2 ಹಾಗೂ ಮಹಿಳಾ ವೇದಿಕೆಯ ಆಶ್ರಯದಲ್ಲಿ ನಡೆದ ‘ಲಿಂಗ ಸಮಾನತೆಯ ಅರಿವು ಸಪ್ತಾಹ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಕುಂದಾಪುರ ಇಲ್ಲಿನ ಶಿಶು ಅಭಿವೃದ್ಧಿ ಕಾರ್ಯಕ್ರಮ ಅಧಿಕಾರಿ ಶ್ವೇತಾ ಎನ್ ಸರಕಾರ ಮಹಿಳೆ ಮತ್ತು ಶಿಶು ಅಭಿವೃದ್ಧಿಗೊಸ್ಕರ ಹಲವಾರು ಆಕರ್ಷಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅದರ ಪೂರ್ಣ ಪ್ರಯೋಜನ ಪಡೆಯುವಂತೆ ಹೇಳಿದರು.

ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲ ಪ್ರೊ. ನಿತ್ಯಾನಂದ. ವಿ.ಗಾಂವಕರ ಶಿಕ್ಷಣ ಪಡೆಯುವುದರೊಂದಿಗೆ ಮಹಿಳೆಯರು ಆರ್ಥಿಕವಾಗಿ, ರಾಜಕೀಯವಾಗಿ ಸಬಲರಾಗಿ ಸಾರ್ಥಕ ಬದುಕು ಕಟ್ಟಿಕೊಳ್ಳುವಂತೆ ಕರೆ ನೀಡಿದರು.

ಸಮಾಜಕಾರ್ಯ ವಿಭಾಗದ ಮುಖ್ಯಸ್ಥರು ಹಾಗೂ ರಾಷ್ಟ್ರ‍ೀಯ ಸೇವಾ ಯೊಜನೆ ಘಟಕ 1ರ ಯೋಜನಾಧಿಕಾರಿ ಅನಂತ್‌ಕುಮಾರ್ ಸಿ.ಎಸ್ ಸ್ವಾಗತಿಸಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಮಹಿಳಾ ವೇದಿಕೆಯ ಸಂಚಾಲಕರಾದ ಡಾ. ಸುನೀತಾ ವಿ ಪ್ರಾಸ್ತಾವಿಕವಾಗಿ ಕಾರ್ಯಕ್ರಮದ ಮಹತ್ವ ತಿಳಿಸಿದರು.

ಕೃತ್ತಿಕಾ ಕಾರ್ಯಕ್ರಮ ನಿರೂಪಿಸಿದರು. ಪಲ್ಲವಿ ವಂದಿಸಿದರು. ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ಸುಬ್ರಹ್ಮಣ್ಯ ಎ ಹಾಗೂ ರಾಷ್ಟ್ರ‍ೀಯ ಸೇವಾ ಯೊಜನೆ ಘಟಕ 2ರ ಯೋಜನಾಧಿಕಾರಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಮನೋಜ್‌ ಕುಮಾರ್ ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!