Friday, September 20, 2024
Friday, September 20, 2024

ಸರಸ್ವತಿ ವಿದ್ಯಾಲಯದಲ್ಲಿ ವನಮಹೋತ್ಸವ

ಸರಸ್ವತಿ ವಿದ್ಯಾಲಯದಲ್ಲಿ ವನಮಹೋತ್ಸವ

Date:

ಗಂಗೊಳ್ಳಿ: ಪ್ರಕೃತಿಯ ಜೊತೆಗಿನ ಸಾಮರಸ್ಯದಿಂದ ನಮ್ಮ ಬದುಕು ಸುಂದರವಾಗುತ್ತದೆ. ಆ ನಿಟ್ಟಿನಲ್ಲಿ ವನಮಹೋತ್ಸವದಂತಹ ಆಚರಣೆಗಳು ನಮ್ಮ ನಿತ್ಯದ ಬದುಕಿನ ಅಂಗವಾಗಬೇಕು ಎಂದು ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಡಾ. ಸರೋಜಾ ಅಭಿಪ್ರಾಯಪಟ್ಟರು.

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದ ಸಭಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸರಸ್ವತಿ ವಿದ್ಯಾಲಯದ ಪ್ರಾಂಶುಪಾಲೆ ಕವಿತಾ ಎಂ. ಸಿ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ವಿದ್ಯಾರ್ಥಿ ನಾಯಕ ಆಕಾಶ ಉಪಸ್ಥಿತರಿದ್ದರು.

ಇತಿಹಾಸ ಉಪನ್ಯಾಸಕ ಭಾಸ್ಕರ್ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಮಹಿಮಾ ಸ್ವಾಗತಿಸಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್ ಕೆ ವಂದಿಸಿದರು. ಶ್ರೇಯ ಖಾರ್ವಿ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಲಾಯಿತು ಮತ್ತು ಸಸಿಗಳನ್ನು ನೆಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...
error: Content is protected !!