Friday, September 20, 2024
Friday, September 20, 2024

ಮಾದಕ ವ್ಯಸನ ವಿರೋಧಿ ದಿನ

ಮಾದಕ ವ್ಯಸನ ವಿರೋಧಿ ದಿನ

Date:

ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ ಇಲ್ಲಿನ ಸಮಾಜಕಾರ್ಯ ವಿಭಾಗ ಮತ್ತು ರಾಷ್ಟ್ರ‍ೀಯ ಸೇವಾಯೋಜನೆ ಘಟಕ 1, 2 ವತಿಯಿಂದ ಅಂತರಾಷ್ಟ್ರ‍ೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನದ ಪ್ರಯುಕ್ತ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕೋಟ ಪೋಲಿಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರಾದ ಮಧು ಬಿ, ವಿದ್ಯಾರ್ಥಿಗಳು ಜೀವನವನ್ನು ರೂಪಿಸಿಕೊಳ್ಳುವಲ್ಲಿ ತಮ್ಮ ಗಮನಹರಿಸಬೇಕು. ಭವ್ಯ ಭಾರತದ ಸತ್ಪ್ರಜೆಗಳಾಗಿ ಬಾಳಬೇಕು. ಮಾದಕ ವ್ಯಸನವು ಒಂದು ವ್ಯಸನವಾಗಿದ್ದು ಇಂತಹ ದುಶ್ಚಟಗಳಿಂದ ದೂರವಿರುವುದರಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು. ಮಾದಕ ವ್ಯಸನಕ್ಕೆ ಸಂಬಂಧಿಸಿದಂತಹ ಕಾಯಿದೆಗಳನ್ನು ವಿವರಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಮಾದಕವ್ಯಸನದ ವಿರುದ್ಧ ಅರಿವು ಮೂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವಕರ ವಹಿಸಿದ್ದರು. ಸಮಾಜಕಾರ್ಯದ ಮುಖ್ಯಸ್ಥರಾದ ಅನಂತ್‌ಕುಮಾರ್ ಸಿ.ಎಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಮನೋಜ್‌ಕುಮಾರ್ ಎಂ ವಂದಿಸಿದರು.

ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕ ಡಾ. ಸುಬ್ರಹ್ಮಣ್ಯ ಎ ಮತ್ತು ಪ್ರೊಬೇಷನರಿ ಆರಕ್ಷಕ ಉಪನಿರೀಕ್ಷರಾದ ಪುನೀತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ವೇತಾ ಸ್ವಾಗತಿಸಿ, ಮೇಘಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!