Friday, September 20, 2024
Friday, September 20, 2024

ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ- ವೈದ್ಯರ ದಿನಾಚರಣೆ

ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ- ವೈದ್ಯರ ದಿನಾಚರಣೆ

Date:

ಉಡುಪಿ: ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇದರ ವತಿಯಿಂದ ವೈದ್ಯರ ದಿನಾಚರಣೆ, ಕುಟುಂಬೋತ್ಸವ ಮತ್ತು ವೈದ್ಯ ಸಿರಿ ಪ್ರಶಸ್ತಿ ಪ್ರದಾನ ಸಮಾರಂಭ ಮಣಿಪಾಲ್ ಇನ್ ಹೊಟೇಲ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತುಳು ರಂಗಭೂಮಿಯ ಹೆಸರಾಂತ ಕಲಾವಿದ ಅರವಿಂದ್ ಬೋಳಾರ್, ವೈದ್ಯರು ನಮ್ಮ ಕಣ್ಣಿಗೆ ಕಾಣುವ ದೇವರಿದ್ದಂತೆ. ಅವರು ತಮ್ಮ ಕುಟುಂಬಕ್ಕೆ ಸಮಯ ನೀಡದೆ ರೋಗಿಗಳ ಆರೈಕೆಯಲ್ಲಿ ಸಮಯ ಕಳೆಯುತ್ತಾರೆ. ವೈದ್ಯರಿಗೆ ಸಿಗುವ ಈ ಅಪೂರ್ವ ಅವಕಾಶ ಬೇರೆ ಯಾರಿಗೂ ಸಿಗಲು ಸಾದ್ಯವಿಲ್ಲ ಎಂದರು.

ಮುಖ್ಯ ಅತಿಥಿ ಕಾನೂನು ಸಲಹೆಗಾರ ಮತ್ತು ಹೆಸರಾಂತ ವಕೀಲರಾದ ವಿವೇಕಾನಂದ ಪಣಿಯಾಲ ಮಾತನಾಡಿ, ವೈದ್ಯರಿಗೆ ನಮ್ಮ ಸಮಾಜದಲ್ಲಿ ಹೆಚ್ಚಿನ ಗೌರವ ಸಿಗಬೇಕು ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಂದ ವೈದ್ಯರಿಗೆ ತೊಂದರೆ ಕೊಡಲಾಗುತ್ತಿದೆ. ಇದು ಸಲ್ಲದು ಎಂದರು.

ಎ.ಎಫ್.ಐ ರಾಜ್ಯ ಕಾರ್ಯದರ್ಶಿ ಡಾ. ಸೋಮಶೇಖರ್ ಹುದ್ದಾರ್, ವೈದ್ಯರು ಸಮಾಜದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಅವರ ಕುಟುಂಬದವರ ಬೆಂಬಲ ಮತ್ತು ಪ್ರೋತ್ಸಾಹ ಕಾರಣ. ಹೀಗಾಗಿ ಈ ರೀತಿಯ ಕುಟುಂಬೋತ್ಸವ ಉತ್ತಮವಾದ ಕೆಲಸ ಎಂದರು.

ಗಿರಿಜಾ ಎಂಟರ್ಪ್ರೈಸಸ್ ಮಾಲಕ ರವೀಂದ್ರ ಶೆಟ್ಟಿ ಶುಭ ಹಾರೈಸಿದರು. ಎಸ್.ಡಿ.ಎಂ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಶೆಟ್ಟಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಹಿರಿಯ ವೈದ್ಯರುಗಳಾದ ಡಾ. ಜಿ.ಎಂ ಕಂಠಿ, ಕಾರ್ಕಳ ತಾಲೂಕಿನ ಡಾ. ಭರತೇಶ್ ಎ, ಕುಂದಾಪುರದ ಡಾ. ಸುರೇಶ್ ಶೆಟ್ಟಿ ನಾಡಾ ರವರಿಗೆ ವೈದ್ಯ ಸಿರಿ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ.ಎಫ್.ಐ ಜಿಲ್ಲಾಧ್ಯಕ್ಷ ಡಾ. ಎನ್.ಟಿ ಅಂಚನ್ ವಹಿಸಿದ್ದರು. ವೇದಿಕೆಯಲ್ಲಿ ಕುಂದಾಪುರ ತಾಲೂಕು ಅಧ್ಯಕ್ಷ ಡಾ. ರವೀಂದ್ರ, ಕಾರ್ಕಳ ತಾಲೂಕು ಅಧ್ಯಕ್ಷ ಡಾ. ಸುದರ್ಶನ್ ಹೆಬ್ಬಾರ್, ಉಡುಪಿ ತಾಲೂಕು ಅಧ್ಯಕ್ಷ ಡಾ. ಮನೋಜ್ ಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಡಾ. ರವಿ ಪ್ರಸಾದ್ ಹೆಗ್ಡೆ ನಿರೂಪಿಸಿದರು. ಡಾ. ಸತೀಶ್ ರಾವ್ ವಂದಿಸಿದರು. ವೈದ್ಯರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ವಿವಿಧ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!