Friday, September 20, 2024
Friday, September 20, 2024

ಉಡುಪಿ ಜಿಲ್ಲೆಗೆ ವಿಶ್ವವಿದ್ಯಾನಿಲಯ ಬೇಡಿಕೆ ಸಲ್ಲಿಕೆ

ಉಡುಪಿ ಜಿಲ್ಲೆಗೆ ವಿಶ್ವವಿದ್ಯಾನಿಲಯ ಬೇಡಿಕೆ ಸಲ್ಲಿಕೆ

Date:

ಉಡುಪಿ: ಹೊಸ ಶಿಕ್ಷಣ ನೀತಿಯ ಆಶಯದಂತೆ, ಜಿಲ್ಲೆಗೊಂದು ವಿಶ್ವವಿದ್ಯಾನಿಲಯವನ್ನು ಆರಂಭಿಸಲು ಶಿಫಾರಸ್ಸು ಮಾಡಿದೆ. ಅದರಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಿಶ್ವವಿದ್ಯಾನಿಲಯ ಆರಂಭವಾಗಲಿದೆ. ಶೈಕ್ಷಣಿಕವಾಗಿ ಸಮೃದ್ಧವಾಗಿರುವ ಸುಮಾರು 35 ಕ್ಕೂ ಮಿಕ್ಕಿ ಪ್ರಥಮ ದರ್ಜೆ ಕಾಲೇಜುಗಳನ್ನು ಹೊಂದಿರುವ 25 ಸಾವಿರಕ್ಕೂ ಮಿಕ್ಕ ಪಾರಂಪರಿಕ ಪದವಿ ವಿದ್ಯಾರ್ಥಿಗಳನ್ನು ಹೊಂದಿರುವ ಉಡುಪಿ ಜಿಲ್ಲೆಗೆ ಹೊಸದಾಗಿ ವಿಶ್ವವಿದ್ಯಾನಿಲಯದ ಸ್ಥಾಪನೆಗೆ ಕೂಡಲೇ ಮಂಜೂರು ಮಾಡಿಸಿ, ವಿಶ್ವವಿದ್ಯಾನಿಲಯವನ್ನು ಆರಂಭ ಮಾಡಿಸುವಂತೆ ನಿವೃತ್ತ ಉಪಕುಲಪತಿಗಳಾದ ಪ್ರೊ. ಬಿ.ಎಸ್. ಶೇರಿಗಾರ್‌ರವರ ನೇತೃತ್ವದ ಉಡುಪಿ ಜಿಲ್ಲೆಯ ಶಿಕ್ಷಣ ಪ್ರೇಮಿಗಳ ನಿಯೋಗ ಉಡುಪಿ ಶಾಸಕ ಕೆ. ರಘುಪತಿ ಭಟ್‌ರವರಿಗೆ ಮನವಿ ಸಲ್ಲಿಸಿತು.

ಉಡುಪಿ ಜಿಲ್ಲೆಗೆ ಸಾರ್ವಜನಿಕ ನೆಲೆಯ ಸಾಮಾನ್ಯ ವಿಶ್ವವಿದ್ಯಾನಿಲಯದ ಸ್ಥಾಪನೆ ಹೆಚ್ಚು ಅವಶ್ಯಕ. ಪ್ರಸ್ತುತ ಮತ್ತು ಸಮಯೋಚಿತ ಎಂಬ ನೆಲೆಯಲ್ಲಿ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸುವ ಪ್ರಸ್ತಾವನೆಗೆ ಸರಕಾರದ ಮಂಜೂರಾತಿ ದೊರಕಿಸಿಕೊಡುವಂತೆ ಒತ್ತಾಯಿಸಲಾಯಿತು.

ನಿಯೋಗದಲ್ಲಿ ನಿವೃತ್ತ ಪ್ರಾಂಶುಪಾಲರಾದ ಡಾ. ಗಣನಾಥ ಎಕ್ಕಾರ್, ಡಾ. ಜಗದೀಶ ಶೆಟ್ಟಿ, ಪ್ರೊ. ಶಿವಾನಂದ ನಾಯಕ್, ಪಿ.ಪಿ.ಸಿ ಪ್ರಾಂಶುಪಾಲರಾದ ಡಾ. ರಾಘವೇಂದ್ರ, ಉಡುಪಿ ಜಿಲ್ಲಾ ಲೀಡ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾಸ್ಕರ ಶೆಟ್ಟಿ ಎಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!