Sunday, September 22, 2024
Sunday, September 22, 2024

ಯುವವಾಹಿನಿ (ರಿ) ಉಡುಪಿ- ವಿದ್ಯಾನಿಧಿ ಕಾರ್ಯಕ್ರಮ

ಯುವವಾಹಿನಿ (ರಿ) ಉಡುಪಿ- ವಿದ್ಯಾನಿಧಿ ಕಾರ್ಯಕ್ರಮ

Date:

ಉಡುಪಿ: ಯುವವಾಹಿನಿ (ರಿ) ಉಡುಪಿ ಘಟಕದಿಂದ ವಿದ್ಯಾನಿಧಿ ಕಾರ್ಯಕ್ರಮ ಯುವವಾಹಿನಿ ಸಭಾಂಗಣದಲ್ಲಿ ಜರಗಿತು. ಶೈಕ್ಷಣಿಕವಾಗಿ ಸಾಧನೆ ಮಾಡಿದ ಭರತ್, ಲೇಖನ, ಶ್ರಾವ್ಯಾ ಹಾಗೂ ಪೂಜಾ ಇವರನ್ನು ಸನ್ಮಾನಿಸಲಾಯಿತು.

ಕೋಶಾಧಿಕಾರಿ ಸುಜಾತ ಪ್ರವೀಣ್ ಸನ್ಮಾನಿತರನ್ನು ಪರಿಚಯಿಸಿದರು. ವಿದ್ಯಾನಿಧಿಗೆ ಸಂಗ್ರಹಿಸಿದ ದೇಣಿಗೆ ರೂ 52,000 ನ್ನು ಪ್ರವೀಣ್ ಡಿ ಪೂಜಾರಿ ಹಾಗೂ ಭಾಸ್ಕರ ಪೂಜಾರಿ ಅಲೆವೂರು ಅಧ್ಯಕ್ಷರಿಗೆ ಹಸ್ತಾಂತರಿಸಿದರು.

16 ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ನೀಡಿ ಪ್ರೋತ್ಸಾಹಿಸಲಾಯಿತು. ಮುಖ್ಯ ಅತಿಥಿಗಳನ್ನು ದಯಾನಂದ ಕರ್ಕೇರ ಪರಿಚಯಿಸಿದರು. ಪರ್ಕಳ ಶೆಟ್ಟಿಬೆಟ್ಟು ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕರಾದ ಅಮೃತ್‌ರಾಜ್ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಉನ್ನತಿಯ ಜೊತೆಗೆ ಸಂಸ್ಕಾರಯುತ ಬದುಕನ್ನು ರೂಢಿಸಿಕೊಳ್ಳಬೇಕು.

ಗುರುಹಿರಿಯರ ಆದರ್ಶದಲ್ಲಿ ಸಮಾಜಮುಖಿಯಾಗಿ ಬೆಳೆಯಬೇಕು. ಯುವವಾಹಿನಿಯ ವಿದ್ಯೆ, ಉದ್ಯೋಗ, ಸಂಪರ್ಕ ತತ್ವಗಳಿಗೆ ಬದ್ದವಾಗಿದ್ದರೆ ಒಳಿತು ಸಾಧ್ಯ ಎಂದರು. ಮಹಾಬಲ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಘಟಕದ ಮಾಜಿ ಅಧ್ಯಕ್ಷರಾದ ದಯಾನಂದ ಪೂಜಾರಿ, ಸಂಚಾಲಕರಾದ ಭಾಸ್ಕರ ಸುವರ್ಣ ಮುಂತಾದವರು ಉಪಸ್ಥಿತರಿದ್ದರು.

ವಿದ್ಯಾನಿಧಿ ನಿರ್ದೇಶಕರಾದ ಪ್ರವೀಣ್ ಡಿ ಪೂಜಾರಿ ಪ್ರಸ್ತಾವಿಕವಾಗಿ ಮಾತನಾಡಿದರು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಮಹಾಬಲ ಸ್ವಾಗತಿಸಿ, ಕಾರ್ಯದರ್ಶಿ ವಿನೋದ್ ಮಂಚಿ ವಂದಿಸಿದರು. ಶ್ರೀಲಕ್ಷ್ಮೀ ಹಾಗೂ ನವೀಷಾ ಕಾರ್ಯಕ್ರಮ ನಿರೂಪಿಸಿದರು. ಹರ್ಷಿತ ಮತ್ತು ಜ್ಞಾನೇಶ್ವರಿ ಪ್ರಾರ್ಥನೆ ನೆರವೇರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!