Sunday, September 22, 2024
Sunday, September 22, 2024

ಸರಕಾರಿ ಶಾಲೆ ಉಳಿಸಿ ಬೆಳೆಸಬೇಕು: ವಿಜಯ್ ಕೊಡವೂರು

ಸರಕಾರಿ ಶಾಲೆ ಉಳಿಸಿ ಬೆಳೆಸಬೇಕು: ವಿಜಯ್ ಕೊಡವೂರು

Date:

ಕೊಡವೂರು: ಕೊಡವೂರು ವಾರ್ಡ್ ನಗರಸಭಾ ಸದಸ್ಯ ವಿಜಯ್ ಕೊಡವೂರು ಇವರ ಸಂಯೋಜನೆಯಲ್ಲಿ ದಾನಿಗಳಾದ ಅಪೂರ್ವ ಪುತ್ತೂರು ತಂಡದ ಸಹಕಾರದಲ್ಲಿ ಸುಬ್ರಹ್ಮಣ್ಯ ಹಿಲ್ ಶಾಲೆಗೆ ಉಚಿತವಾಗಿ ಅಪಘಾತ ವಿಮೆ ಕಾರ್ಡ್ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ನಗರಸಭಾ ಸದಸ್ಯ ವಿಜಯ್ ಕೊಡವೂರು ಮಾತನಾಡುತ್ತಾ, ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸಬೇಕು, ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸದ ಜೊತೆಯಲ್ಲಿ ನಮ್ಮ ಪರಂಪರೆ ನಮ್ಮ ದೇಶ ನಮ್ಮ ಇತಿಹಾಸ ನೆನಪು ಮಾಡುವುದರ ಮುಖಾಂತರ ಒಬ್ಬ ವ್ಯಕ್ತಿಗೆ ಸಂಸ್ಕೃತಿಯನ್ನು ಕಲಿಸುವುದು ನಡೆಯುತ್ತಿದೆ. ನಾವು ಸರಕಾರಿ ಶಾಲೆಗಳನ್ನು ಉಳಿಸುವ ಅವಶ್ಯಕತೆ ಇದೆ. ಉಡುಪಿ ಜಿಲ್ಲೆಯ ಎಲ್ಲಾ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಇದೊಂದು ಸಣ್ಣ ಪ್ರಯತ್ನ ಎಂದರು.

ಅಪೂರ್ವ ಪುತ್ತೂರು ಅಧ್ಯಕ್ಷರಾದ ಅಶೋಕ್, ಸ್ಟಾರ್ ಹೆಲ್ತ್ ಪ್ರಮುಖರಾದ ಉದಯ್ ನಾಯ್ಕ್, ಹಿರಿಯ ವಿದ್ಯಾರ್ಥಿ ಪುರಂದರ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಭಾಶಿನಿ, ಕಿಶೋರ್, ಅಶೋಕ್, ಪ್ರಸಿದ್, ಶಾಲಾ ಮುಖ್ಯೋಪಾಧ್ಯಾಯರಾದ ಸುಜಾತ, ಸಹ ಶಿಕ್ಷಕಿ ನಿಶಾವತಿ, ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...
error: Content is protected !!