Sunday, September 22, 2024
Sunday, September 22, 2024

ಕೆಮ್ಮಣ್ಣು- ಮಕ್ಕಳ ರಕ್ಷಣಾ ಕಾಯಿದೆಯ ಅರಿವು ಕಾರ್ಯಕ್ರಮ

ಕೆಮ್ಮಣ್ಣು- ಮಕ್ಕಳ ರಕ್ಷಣಾ ಕಾಯಿದೆಯ ಅರಿವು ಕಾರ್ಯಕ್ರಮ

Date:

ಕೆಮ್ಮಣ್ಣು: ಚೈಲ್ಡ್ ಲೈನ್-1098, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ರೋಟರಿ ಉಡುಪಿ ಇವರ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆ ಮತ್ತು ಚೈಲ್ಡ್ ಲೈನ್ ಸೇ ದೋಸ್ತಿ ಸಪ್ತಾಹದ ಅಂಗವಾಗಿ ಕಾರ್ಮೆಲ್ ಪ್ರೌಢಶಾಲೆ ಕೆಮ್ಮಣ್ಣು ಇಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆಯ ಕಾಯಿದೆಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷರಾದ ಬಿ.ಕೆ ನಾರಾಯಣ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು ಮತ್ತು ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯದ ಕುರಿತು ಸುರಕ್ಷಿತ ಸ್ಪರ್ಶ ಮತ್ತು ಅಸುರಕ್ಷಿತ ಸ್ಪರ್ಶದ ಬಗ್ಗೆ ತಿಳಿಸಿದರು.

ಲೈಂಗಿಕ ದೌರ್ಜನ್ಯದ ಬಗ್ಗೆ ಜಾಗೃತರಾಗಿರಬೇಕು ಹಾಗೂ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚು ಕಾನೂನಿನ ನೆರವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು. ಯಾವುದೇ ರೀತಿಯಾದ ಸಮಸ್ಯೆಯಾದಲ್ಲಿ ಚೈಲ್ಡ್ ಲೈನ್ 1098 ಇದಕ್ಕೆ ಕರೆ ಮಾಡಿ ಸಹಾಯವನ್ನು ಪಡೆಯಲು ತಿಳಿಸಿದರು.

ಚೈಲ್ಡ್ ಲೈನ್-1098 ಉಡುಪಿಯ ನಿರ್ದೆಶಕರಾದ ರಾಮಚಂದ್ರ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಚೈಲ್ಡ್ ಲೈನ್-1098 ಉಡುಪಿ ಕೇಂದ್ರ ಸಂಯೋಜಕರಾದ ಜ್ಯೋತಿ ಚೈಲ್ಡ್ ಲೈನ್-1098 ರ ಬಗ್ಗೆ, ಬಾಲ್ಯವಿವಾಹದ ಬಗ್ಗೆ ತಿಳಿಸಿದರು. ಮಕ್ಕಳಿಗೆ ಅವರ ಹಕ್ಕು ಮತ್ತು ಕರ್ತವ್ಯದ ಬಗ್ಗೆ ಅರಿವು ಮೂಡಿಸಿದರು ಹಾಗೂ ಮಕ್ಕಳು ಯಾವ ಸಂದರ್ಭದಲ್ಲಿ ಚೈಲ್ಡ್‍ಲೈನ್-1098ಕ್ಕೆ ಕರೆ ಮಾಡಬೇಕು ಎಂದು ತಿಳಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸಿಸ್ಟರ್ ವಿನ್ನಿ ಡಿ’ಸೋಜ ಶುಭ ಹಾರೈಸಿದರು.

ಚೈಲ್ಡ್ ಲೈನ್-1098 ಉಡುಪಿಯ ಸಿಬ್ಬಂದಿಗಳು, ಮತ್ತು ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ರೋಟರಿ ಉಡುಪಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಕಾರಂತ್ ಸ್ವಾಗತಿಸಿ ಕಾರ್ಮೆಲ್ ಶಾಲೆಯ ವಿದ್ಯಾರ್ಥಿನಿ ತ್ರಿಶಾ ವಂದಿಸಿದರು. ಚೈಲ್ಡ್ ಲೈನ್-1098 ಆಪ್ತ ಸಮಾಲೋಚಕಿ ನಯನ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...
error: Content is protected !!