Friday, September 20, 2024
Friday, September 20, 2024

ಶಿಕ್ಷಣ ಮತ್ತು ಸಂಶೋಧನೆಗೆ ಮಣಿಪಾಲದ ಮಾಹೆ ಕೊಡುಗೆ ಶ್ಲಾಘನೀಯ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಶಿಕ್ಷಣ ಮತ್ತು ಸಂಶೋಧನೆಗೆ ಮಣಿಪಾಲದ ಮಾಹೆ ಕೊಡುಗೆ ಶ್ಲಾಘನೀಯ: ರಕ್ಷಣಾ ಸಚಿವ ರಾಜನಾಥ್ ಸಿಂಗ್

Date:

ಮಣಿಪಾಲ: ಶಿಕ್ಷಣ ಮತ್ತು ಸಂಶೋಧನೆಗೆ ಮಣಿಪಾಲದ ಮಾಹೆ ಕೊಡುಗೆ ಶ್ಲಾಘನೀಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಶುಕ್ರವಾರ ಮಣಿಪಾಲದ ಮಾಹೆ ವಿ.ವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

2014 ರ ಅವಧಿಯಲ್ಲಿ ದೇಶಾದ್ಯಂತ 400-500 ಸ್ಟಾರ್ಟ್ ಅಪ್ ಗಳಿದ್ದವು. ಇದೀಗ ಸ್ಟಾರ್ಟ್ ಅಪ್ ಗಳ ಸಂಖ್ಯೆ 70,000 ದಾಟಿದೆ. ಇವುಗಳಲ್ಲಿ 100 ಯೂನಿಕಾರ್ನ್ ಗಳಾಗಿವೆ.

ಜಗತ್ತಿನಾದ್ಯಂತ ಪ್ರತಿಷ್ಠಿತ ಕಂಪನಿಗಳು ಬೆಳೆಯಲು ಭಾರತೀಯರ ಕೊಡುಗೆ ಇದೆ. ನಮ್ಮ ಯುವಜನರು ದೇಶದಲ್ಲೇ ಕಂಪನಿಗಳನ್ನು ಆರಂಭಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರ ನ್ಯೂ ಇಂಡಿಯಾ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಯುವಶಕ್ತಿ ನೂತನ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಬೇಕು.

ಪ್ರಾಚೀನ ಮತ್ತು ಆಧುನಿಕ ಜ್ಞಾನದ ಮಿಶ್ರಣವೇ ನೂತನ ಶಿಕ್ಷಣ ನೀತಿ. ಯುವಜನರನ್ನು ಜಾಗತಿಕ ಪ್ರಜೆಗಳಾಗಿ ರೂಪಿಸಲು ನೂತನ ಶಿಕ್ಷಣ ನೀತಿ ಪ್ರಮುಖ ಪಾತ್ರ ವಹಿಸಲಿದೆ.

ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಳೆದ ಐದು ವರ್ಷದಲ್ಲಿ ವಿಶ್ವದ ಬಲಿಷ್ಠ ಆರ್ಥಿಕ ದೇಶವಾಗಿ ಭಾರತ ಬೆಳೆಯುತ್ತಿದೆ. ಭಾರತ ಯಾರ ತಂಟೆಗೂ ಹೋಗಲ್ಲ. ನಮ್ಮ ತಂಟೆಗೆ ಬಂದರೆ ತಕ್ಕ ಉತ್ತರ ಕೊಡುತ್ತೇವೆ ಎಂದು ಶತ್ರು ರಾಷ್ಟ್ರಗಳಿಗೆ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...
error: Content is protected !!