Friday, September 20, 2024
Friday, September 20, 2024

ಸ್ವಚ್ಛತೆಯಲ್ಲಿ ಉಡುಪಿ ನಗರಕ್ಕೆ ಮೊದಲ ಸ್ಥಾನ ಸಿಗಲು ಪ್ರಯತ್ನಿಸಿ: ಟಿ.ಜಿ. ಹೆಗ್ಡೆ

ಸ್ವಚ್ಛತೆಯಲ್ಲಿ ಉಡುಪಿ ನಗರಕ್ಕೆ ಮೊದಲ ಸ್ಥಾನ ಸಿಗಲು ಪ್ರಯತ್ನಿಸಿ: ಟಿ.ಜಿ. ಹೆಗ್ಡೆ

Date:

ಉಡುಪಿ: ಉಡುಪಿ ನಗರಸಭೆ ಹಾಗೂ ಸಿತಾರ ಸಂಸ್ಥೆ ದಾವಣಗೆರೆ ಇವರ ಸಹಯೋಗದಲ್ಲಿ ಸ್ವಚ್ಛ ಭಾರತ್ ಅಭಿಯಾನ (ನಗರ)ದ ಅಡಿಯಲ್ಲಿ ಬಲ್ಕ್ ವೇಸ್ಟ್ ಉತ್ಪಾದಕರಿಗೆ ಜಾಗೃತಿ ಕಾರ್ಯಕ್ರಮ ನಗರದ ಕಿದಿಯೂರು ಹೋಟೆಲ್‌ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿರಬೀಡು ವಾರ್ಡಿನ ನಗರಸಭಾ ಸದಸ್ಯ ಟಿ.ಜಿ ಹೆಗ್ಡೆ ಮಾತನಾಡಿ, ಉಡುಪಿ ನಗರಸಭೆಯು ಸ್ವಚ್ಛತೆ ವಿಭಾಗದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಸ್ವಚ್ಚ ಸರ್ವೇಕ್ಷಣಾ -2022 ರಲ್ಲಿ ರಾಜ್ಯದಲ್ಲಿ ಉಡುಪಿ ನಗರವು ಮೊದಲ ಸ್ಥಾನ ಪಡೆಯಲು ನಗರ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ದೊಡ್ಡ ಹೋಟೆಲ್‌ಗಳಲ್ಲಿ ಹಸಿಕಸ ನಿರ್ವಹಣೆ ಕ್ಲಿಷ್ಟಕರವಾಗಿದ್ದು, ಈ ಜಾಗೃತಿ ಕಾರ್ಯಕ್ರಮದಿಂದ ಹಸಿಕಸ ನಿರ್ವಹಣೆ ಸಾಧ್ಯ ಎಂದರು.

ನಗರ ಸಭೆಯ ಪರಿಸರ ಅಭಿಯಂತರಿ ಸ್ನೇಹ ಮಾತನಾಡಿ, ನಗರದ ಜನರು ಸ್ವಚ್ಛತೆಗಾಗಿ ಸಹಕಾರ ನೀಡುತ್ತಿದ್ದು, 2021 ರ ಸ್ವಚ್ಚ ಸರ್ವೇಕ್ಷಣೆಯಲ್ಲಿ ಬಯಲು ಬಹಿರ್ದೆಸೆ ಮುಕ್ತ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ವರ್ಷದಲ್ಲಿ ಇನ್ನೂ ಹೆಚ್ಚಿನ ಸ್ವಚ್ಛತೆ ಕಾಪಾಡಿಕೊಂಡಲ್ಲಿ ಸ್ವಚ್ಛ ಸರ್ವೇಕ್ಷಣ್-2022 ರಲ್ಲಿ ಅತ್ಯಂತ ಸ್ವಚ್ಛ ನಗರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯಬಹುದು.

ಸ್ವಚ್ಛತೆ ಕಾಪಾಡುವುದರ ಜೊತೆಗೆ ಎಲ್ಲರೂ ಸ್ವಚ್ಛತಾ ಆಪ್ ಅನ್ನು ಡೌನ್ಲೋಡ್ ಮಾಡಿ ಅದರಲ್ಲಿ ಉತ್ತಮ ಶ್ರೇಯಾಂಕ ನೀಡುವಂತೆ ತಿಳಿಸಿದರು. ನಗರಸಭೆಯ ಸ್ವಚ್ಛತಾ ರಾಯಭಾರಿ ಜೋಸೆಫ್ ಜಿ ಎಮ್ ರೆಬೆಲ್ಲೋ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಗಸಭೆಯ ಹಿರಿಯ ಆರೋಗ್ಯ ಸಹಾಯಕಿ ಶಶಿರೇಖಾ, ಕಿದಿಯುರ್ ಹೋಟೆಲ್‌ನ ಎಕ್ಸಿಕ್ಯೂಟಿವ್ ಚೀಫ್ ಫಾಜೀಮ್, ಹೋಟೆಲ್ ಮೇಲ್ವಿಚಾರಣಾ ಸಿಬ್ಬಂದಿಗಳು ಹಾಗೂ 50 ಕ್ಕೂ ಹೋಟೆಲ್ ಸಿಬ್ಬಂದಿಗಳು ಭಾಗವಹಿಸಿದ್ದರು. ಸಿತಾರ ಸಂಸ್ಥೆಯ ರವಿಕುಮಾರ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!