Sunday, September 22, 2024
Sunday, September 22, 2024

ದೇಶದ ಸಮಗ್ರತೆಯನ್ನು ಗೌರವಿಸಿ: ವಿದ್ವಾನ್‌ ಗಣಪತಿ ಭಟ್‌

ದೇಶದ ಸಮಗ್ರತೆಯನ್ನು ಗೌರವಿಸಿ: ವಿದ್ವಾನ್‌ ಗಣಪತಿ ಭಟ್‌

Date:

ಉಡುಪಿ: ಕಾರ್ಕಳದ ಕ್ರಿಯೇಟಿವ್‌ ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ನಡೆಯಿತು. ಭಾರತದ ಸಾರ್ವಭೌಮತೆಯ ರಕ್ಷಣೆ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸಲು ಸಂವಿಧಾನದ ರಚನೆಯನ್ನು ಮಾಡಲಾಯಿತು.

ದೇಶದ ಪ್ರಜೆಗಳು ದೇಶದ ಕಾನೂನನ್ನು ಗೌರವಿಸಿ ಮತ್ತು ಸಂವಿಧಾನದ ಆಶಯದಂತೆ ಬದುಕನ್ನು ನಡೆಸಬೇಕು ಎಂದು ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಕರೆ ನೀಡಿದರು. ಸಂವಿಧಾನವನ್ನು ರಚನೆ ಮಾಡಬೇಕಾದರೆ ಅನೇಕ ದೇಶಗಳಲ್ಲಿರುವ ಕಾಯ್ದೆ, ಕಾನೂನುಗಳನ್ನು ಅಳವಾಗಿ ಅಧ್ಯಯನ ನಡೆಸಿ ಎಲ್ಲರಿಗೂ ನ್ಯಾಯ ಸಿಗುವಂತೆ ರಚಿಸಲಾಗಿದೆ.

ಡಾ. ಬಿ ಆರ್‌ ಅಂಬೇಡ್ಕರ್‌ ಅವರನ್ನು ಸಂವಿಧಾನ ರಚನಾ ಕರಡು ಸಮೀತಿಯ ಅಧ್ಯಕ್ಷರನ್ನಾಗಿ ನೇಮಿಸಿ ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ಲಿಖಿತ ಸಂವಿಧಾನವನ್ನು ರಚಿಸಲಾಯಿತು. ಅವರ ಆಶಯಕ್ಕೆ ಅನುಗುಣವಾಗಿ ದೇಶದ ಸಮಗ್ರತೆಯನ್ನು ಗೌರವಿಸಿ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅನುಭವಿಸಬೇಕೆಂದು ಕರೆ ನೀಡಿದರು.

ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಉಪನ್ಯಾಸಕರಾದ ರಾಘವೇಂದ್ರ ಬಿ ರಾವ್‌, ಶಿವಕುಮಾರ್‌, ಉಮೇಶ್‌, ಅಕ್ಷತಾ ಜೈನ್‌, ರಾಮಕೃಷ್ಣ ಹೆಗಡೆ, ಡಾ. ಆದಂ ಶೇಕ್‌, ಸಾರ್ವಜನಿಕ ಸಂಪರ್ಕ ಅಧಿಕಾರಿ ಲಿಶನ್‌ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!