Sunday, September 22, 2024
Sunday, September 22, 2024

ರಥಬೀದಿ ಕಾಲೇಜು- ಪುರುಷರ ವಾಲಿಬಾಲ್ ಪಂದ್ಯಾಟ

ರಥಬೀದಿ ಕಾಲೇಜು- ಪುರುಷರ ವಾಲಿಬಾಲ್ ಪಂದ್ಯಾಟ

Date:

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ- ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜನೆಯೊಂದಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟ-2022-23 ಮಂಗಳ ಕ್ರೀಡಾಂಗಣ ವಾಲಿಬಾಲ್ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಕಿಶೋರ್ ಕುಮಾರ್ ಸಿ.ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ, ಕಾಲೇಜನ್ನು ಮತ್ತು ಕಾಲೇಜಿನ ಕ್ರೀಡಾ ಇತಿಹಾಸದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ಸಾಯಿ ಹಾಗೂ ಭಾರತ ಜೂನಿಯರ್ ವಾಲಿಬಾಲ್ ತಂಡದ ತರಬೇತುದಾರರಾದ ನಾರಾಯಣ್ ಆಳ್ವ ಜಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಧಾಕರನ್ ಟಿ. ಉಪಸ್ಥಿತರಿದ್ದರು.

ಪಂದ್ಯಾಟದ ಪರಿವೀಕ್ಷಕರಾಗಿ ಡಾ. ಕೇಶವಮೂರ್ತಿ ಅವರು ಮಾತಾನಾಡಿ, ಪಂದ್ಯಾಟದ ಹಾಗೂ ಆಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಸಂಯೋಜಕರಾದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಮೊಹಮ್ಮದ್ ರಫೀಕ್ ಸ್ವಾಗತಿಸಿ, ಕ್ರೀಡಾ ಕಾರ್ಯದರ್ಶಿ ಶಿವಲೀಲಾ ವಂದಿಸಿದರು. ರೇಷ್ಮಾ ಹಾಗೂ ಮೋಹಿತ್ ಕಾರ್ಯಕ್ರಮವನ್ನು ನಿರೂಪಿಸಿದರು.

ಬಹುಮಾನ ವಿತರಣಾ ಮತ್ತು ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೆಶಕ ರವಿ ವೈ ನಾಯಕ್ ವಿಜೇತರಾದವರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.

ಪಂದ್ಯಾಟದ ಪರಿವೀಕ್ಷಕರಾಗಿ ಡಾ. ಕೇಶವಮೂರ್ತಿ ಅವರು ತೀರ್ಪುಗಾರರಾಗಿ ಆಗಮಿಸಿ ಕ್ರೀಡಾಕೂಟ ಯಶಸ್ಸಿಗೆ ಕಾರಣರಾದ ವಿವಿಧ ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕರಿಗೆ, ದಾನಿಗಳಿಗೆ ಹಾಗೂ ಅತ್ಯಂತ ಕ್ಲಿಷ್ಠಕರವಾದ ಸ್ಪರ್ಧೆಯನ್ನು ವಹಿಸಿಕೊಂಡ ಕಾಲೇಜಿಗೆ ಕೃತಜ್ಞತೆಯನ್ನು ಸಲ್ಲಿಸಿ ಆಯೋಜಿಸಿದ ಸ್ಪರ್ಧೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು.

ಕಾಲೇಜಿನ ಮುಖ್ಯ ಶೈಕ್ಷಣಿಕ ಸಲಹೆಗಾರರು ಹಾಗೂ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಸಂತಿ ಪಿ ಅಧ್ಯಕ್ಷತೆಯನ್ನು ವಹಿಸಿ ಸದ್ರಿ ಕ್ರೀಡಾಕೂಟದಲ್ಲಿ ಕೆಲವು ದಾಖಲೆಗಳನ್ನು ನಿರ್ಮಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗಳು ಪಠ್ಯ ಮತ್ತು ಕ್ರೀಡೆಯಲ್ಲಿ ಸರಿಯಾಗಿ ತೊಡಗಿಸಿಕೊಂಡಲ್ಲಿ ಭವ್ಯ ಭವಿಷ್ಯವನ್ನು ಕಾಣಬಹುದೆಂದರು.

ಫಲಿತಾಂಶ: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಮಂಗಳೂರು ವಲಯ ಹಾಗೂ ಉಡುಪಿ ವಲಯ ಮಟ್ಟದಲ್ಲಿ ತೇರ್ಗಡೆಗೊಂಡ 8 ತಂಡಗಳು ಭಾಗವಹಿಸದ್ದು, ಪ್ರಥಮ ಸ್ಥಾನವನ್ನು ಆಳ್ವಾಸ್ ಕಾಲೇಜು ಮೂಡಬಿದ್ರೆ, ದ್ವಿತೀಯ ಸ್ಥಾನವನ್ನು ಎಸ್.ಡಿ.ಎಮ್ ಕಾಲೇಜು ಉಜಿರೆ, ತೃತೀಯ ಸ್ಥಾನವನ್ನು ಬ್ಯಾರೀಸ್ ಕಾಲೇಜು ಕೋಡಿ ಕುಂದಾಪುರ, ಚತುರ್ಥ ಸ್ಥಾನವನ್ನು ಅತಿಥೇಯ ಕಾಲೇಜು ಪಡೆದುಕೊಂಡಿರುತ್ತಾರೆ.

ಪಂದ್ಯಾಟದ ಬೆಸ್ಟ್ ಸೆಟ್ಟರ್ ಸೌರವ್, ಆಳ್ವಾಸ್ ಕಾಲೇಜು, ಮೂಡಬಿದ್ರೆ, ಬೆಸ್ಟ್ ಅಟ್ಯಾಕರ್ ನಿಖಿಲ್, ಎಸ್.ಡಿ.ಎಂ ಕಾಲೇಜು ಉಜಿರೆ, ಬೆಸ್ಟ್ ಆಲ್ ರೌಂಡರ್ ಶಿವು, ಆಳ್ವಾಸ್ ಕಾಲೇಜು, ಮೂಡಬಿದ್ರೆ ಇವರು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!