Saturday, September 21, 2024
Saturday, September 21, 2024

ಮಹಿಳೆಯರು ವ್ಯವಹಾರದಲ್ಲಿ ಹೆಚ್ಚಿನ ಆಸಕ್ತಿ ತೋರಿಸಬೇಕು: ಪ್ರದೀಪ ಭಕ್ತ

ಮಹಿಳೆಯರು ವ್ಯವಹಾರದಲ್ಲಿ ಹೆಚ್ಚಿನ ಆಸಕ್ತಿ ತೋರಿಸಬೇಕು: ಪ್ರದೀಪ ಭಕ್ತ

Date:

ಬ್ರಹ್ಮಾವರ: ಭಾರತೀಯ ಮಹಿಳೆಯರು ಇಂದಿನ ದಿನಗಳಲ್ಲಿ ಸೌಂದರ್ಯಕ್ಕೆ ಆಸಕ್ತಿ ವಹಿಸುತ್ತಿದ್ದಾರೆ. ಈ ಸಮಯದಲ್ಲಿ ಪ್ರಸಾದನ ಕಲೆ ತಿಳಿದವರಿಗೆ ಹೆಚ್ಚು ಬೇಡಿಕೆ ಇರುವುದರಿಂದ ಆಧುನಿಕ ಬದಲಾವಣೆಗೆ ಮಹಿಳೆಯರು ಹೊಂದಿಕೊಂಡು ವ್ಯವಹಾರದಲ್ಲಿ ಹೆಚ್ಚಿನ ಆಸಕ್ತಿ ತೋರಿಸಿ ಸಮಾಜದಲ್ಲಿ ಮುಂದೆ ಬರಬೇಕು ಎಂದು ಕೆನರಾ ಬ್ಯಾಂಕಿನ ನಿವೃತ್ತ ಉಪ ಮಹಾಪ್ರಬಂದಕರಾದ ಪ್ರದೀಪ್ ಭಕ್ತ ಅಭಿಪ್ರಾಯಪಟ್ಟರು.

ಅವರು ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ ಮಹಿಳಾ ಬ್ಯೂಟೀ ಪಾರ್ಲರ್ ನಿರ್ವಹಣಾ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಜೀವನದಲ್ಲಿ ದೃಢವಾದ ವಿಶ್ವಾಸ ಇರಬೇಕು.

ಹೆದರಿಕೆ, ಅಂಜಿಕೆ ಇರಬಾರದು. ಸಾಧನೆ ಮಾಡಬೇಕೆಂದು ಹಸಿವು ಬಳಸಿಕೊಳ್ಳಿ. ನಿಮ್ಮ ಪ್ರಗತಿ ನಡೆದು ಬಂದ ದಾರಿಯ ಸಿಂಹಾವಲೋಕನ ಆಗಾಗ ಮಾಡುತ್ತಿರಿ. ರುಡ್ ಸೆಟ್ ಸಂಸ್ಥೆ ಜೊತೆಗೆ ನಿಕಟವಾದ ಸಂಪರ್ಕ ಇಟ್ಟುಕೊಳ್ಳಿ ಎಂದು ಶುಭ ಹಾರೈಸಿ ಪ್ರಮಾಣ ಪತ್ರ ವಿತರಿಸಿದರು.

ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಲಕ್ಷೀಶ್ ಎ.ಜಿ ವಹಿಸಿದ್ದರು. ಬ್ಯಾಂಕಿನ ಸೌಲಭ್ಯಗಳನ್ನು ಪಡೆದು ವ್ಯವಹಾರ ಮುಂದುವರಿಸಿ, ಸಂಸ್ಥೆಯಲ್ಲಿ ತರಬೇತಿ ಪಡೆದ ನೀವುಗಳು ನಿಮ್ಮ ಅಭಿಪ್ರಾಯವನ್ನು ಹಂಚಿಕೊಂಡು ನಿರುದ್ಯೋಗಿಗಳನ್ನು ಬೇರೆ ಬೇರೆ ತರಬೇತಿಗಳಿಗೆ ಕಳುಹಿಸಿ ಕೊಡಿ ಎಂದರು.

ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕೆ. ಕರುಣಾಕರ್ ಜೈನ್ ಸ್ವಾಗತಿಸಿ, ತರಬೇತಿ ಹಿನ್ನೋಟ ನೀಡಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮವು ಮೈತ್ರಿ ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಅನುಸೂಯ, ಸೌಜನ್ಯ, ಅಂಜಲಿ ತರಬೇತಿ ಅನುಭವ ಹಂಚಿಕೊಂಡರು. ಉಪನ್ಯಾಸಕರಾದ ಸಂತೋಷ್ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!