Friday, September 20, 2024
Friday, September 20, 2024

ಉಡುಪಿ- ಹಣ್ಣು ವ್ಯಾಪಾರದಲ್ಲಿ ತೊಡಗಿದ್ದ ಬಾಲಕನ ರಕ್ಷಣೆ

ಉಡುಪಿ- ಹಣ್ಣು ವ್ಯಾಪಾರದಲ್ಲಿ ತೊಡಗಿದ್ದ ಬಾಲಕನ ರಕ್ಷಣೆ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಿಕ್ಷಾಟನೆ ನಿರತ ಮಕ್ಕಳ ರಕ್ಷಣೆಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಪುರಸಭೆ, ನಗರಸಭೆ, ನಾಗರಿಕ ಸಮಿತಿ ಸಂಯುಕ್ತ ಆಶ್ರಯದಲ್ಲಿ ಸಂತೆ ಮಾರ್ಕೆಟ್ ಗಳಲ್ಲಿ, ಉಡುಪಿ ಬಸ್ ನಿಲ್ದಾಣಗಳಲ್ಲಿ, ಹಾಗೂ ಸುತ್ತಮುತ್ತಲಿನ ದೇವಸ್ಥಾನಗಳ ಬಳಿ ಜಂಟಿಯಾಗಿ ಕಾರ್ಯಚರಣೆಯನ್ನು ನಡೆಸಿದ್ದು ಈ ಸಂದರ್ಭದಲ್ಲಿ ಹಣ್ಣು ವ್ಯಾಪಾರದಲ್ಲಿ ತೊಡಗಿದ್ದ ಓರ್ವ ಬಾಲಕನನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಯಿತು.

ಕಾರ್ಯಾಚರಣೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್., ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು ರಮೇಶ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ, ಕ್ಷೇತ್ರ ಶಿಕ್ಷಣ ಸಂಯೋಜಕ ಶಂಕರ್, ನಗರಸಭೆ ಅಧಿಕಾರಿ ನಾಗರಾಜ್, ಅಮೃತ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಸಿಬ್ಬಂದಿಗಳಾದ ಶ್ರುತಿ, ನಾಗರತ್ನ, ನಾಗರಿಕ ಸಮಿತಿಯ ಮುಖ್ಯಸ್ಥರಾದ ನಿತ್ಯಾನಂದ ಒಳಕಾಡು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಲೋಚಕಿ ಅಂಬಿಕಾ, ಸಮಾಜ ಕಾರ್ಯಕರ್ತೆ ಸುರಕ್ಷಾ, ಔಟ್ ರೀಚ್ ಕಾರ್ಯಕರ್ತ ಸಂದೇಶ್ ಹಾಗೂ ಸುನಂದ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!