Friday, September 20, 2024
Friday, September 20, 2024

ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ

ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ

Date:

ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಕೊಚ್ಚಿನ್ ಶಿಫ್‌ಯಾರ್ಡ್ ಲಿಮಿಟೆಡ್, ಮಲ್ಪೆಯ ಸಿಬ್ಬಂದಿಗಳಿಗೆ ಡಿಸೆಂಬರ್ 5 ರಿಂದ 7 ರ ವರೆಗೆ ಪ್ರಥಮ ಚಿಕಿತ್ಸಾ ತರಬೇತಿ ನಡೆಯಿತು.

ಪ್ರಥಮ ಚಿಕಿತ್ಸಾ ತರಬೇತುದಾರ ಡಾ. ಸುರೇಶ್ ಶೆಣೈ ಹಾಗೂ ಡಾ. ಕೀರ್ತಿ ಅಪಘಾತಕ್ಕೊಳಗಾದವರಿಗೆ ಪ್ರಥಮ ಚಿಕಿತ್ಸೆ ನೀಡುವ ವಿಧಾನ, ರಕ್ತಸ್ರಾವವನ್ನು ತಡೆಗಟ್ಟುವ ಕುರಿತು, ಬ್ಯಾಂಡೇಜ್ ಮಾಡುವ ವಿಧಾನ, ಸಿಪಿಆರ್ ಮಾಡುವ ವಿಧಾನ, ಹಾವು ಕಡಿತ, ವಿಷ ಸೇವನೆ, ಉಸಿರುಗಟ್ಟಿಸುವಿಕೆ, ಮುಳುಗುವಿಕೆ ಮುಂತಾದ ಸಂದರ್ಭಗಳಲ್ಲಿ ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ಕುರಿತು ಪ್ರಾಯೋಗಿಕ ಪ್ರದರ್ಶನಗಳ ಮೂಲಕ ತರಬೇತಿ ನೀಡಿದರು.

ಸಮಾರೋಪ ಕಾರ್ಯಕ್ರಮದಲ್ಲಿ ಉಡುಪಿ ಕೊಚ್ಚಿನ್ ಶಿಫ್‌ಯಾರ್ಡ್ ಲಿಮಿಟೆಡ್, ಮಲ್ಪೆಯ ಸಿ.ಇ.ಓ ಹರಿಕುಮಾರ್ ಹಾಗೂ ಡೆಪ್ಯೂಟಿ ಜನರಲ್ ಮೆನೇಜರ್ ಅಂಬಾಲವನನ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಬಿ. ರತ್ನಾಕರ ಶೆಟ್ಟಿ ಉಪಸ್ಥಿತರಿದ್ದರು. ಉಡುಪಿ ಕೊಚ್ಚಿನ್ ಶಿಫ್‌ಯಾರ್ಡ್ ಲಿಮಿಟೆಡ್‌ನ 25 ಸಿಬ್ಬಂದಿಗಳಿಗೆ ತರಬೇತಿ ನೀಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...
error: Content is protected !!