Friday, September 20, 2024
Friday, September 20, 2024

ಡಿ. 14- ‘ನಾಯಿ ನಾನು’ ಕಥಾ ಸಂಕಲನ ಬಿಡುಗಡೆ

ಡಿ. 14- ‘ನಾಯಿ ನಾನು’ ಕಥಾ ಸಂಕಲನ ಬಿಡುಗಡೆ

Date:

ಉಡುಪಿ: ಗಂಗೊಳ್ಳಿಯ ಸಂಜೀವ ಪಾರ್ವತಿ ಪ್ರಕಾಶನ ಪ್ರಕಟಿಸಿರುವ ಲೇಖಕ ನರೇಂದ್ರ ಎಸ್ ಗಂಗೊಳ್ಳಿಯವರ ಕಥಾ ಸಂಕಲನ ‘ನಾಯಿ ನಾನು’ ಡಿಸೆಂಬರ್ 14 ಬುಧವಾರ ಮಧ್ಯಾಹ್ನ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಬಿಡುಗಡೆಗೊಳ್ಳಲಿದೆ.

ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದದ ಸ್ಥಾಪಕರಾದ ಡಾ. ಗೋವಿಂದ ಬಾಬು ಪೂಜಾರಿಯವರು ಪುಸ್ತಕವನ್ನು ಬಿಡುಗಡೆಗೊಳಿಸಲಿದ್ದಾರೆ. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಲಿದ್ದಾರೆ.

ಹಿರಿಯ ನಿವೃತ್ತ ಸಹಕಾರಿ ಕೆ ಪುಂಡಲೀಕ ನಾಯಕ್ ಪುಸ್ತಕ ಪರಿಚಯ ಮಾಡಲಿದ್ದು, ಜಿಎಸ್ ವಿಎಸ್ ಅಸೋಸಿಯೇಷನ್ ಸದಸ್ಯರಾದ ರಾಮನಾಥ ನಾಯಕ್, ಬಿಲ್ಲವರ ಹಿತ ರಕ್ಷಣಾ ವೇದಿಕೆ ಗಂಗೊಳ್ಳಿಯ ಅಧ್ಯಕ್ಷರಾದ ಗೋಪಾಲ ಪೂಜಾರಿ, ರೋಟರಿ ಕ್ಲಬ್ ಗಂಗೊಳ್ಳಿಯ ಅಧ್ಯಕ್ಷರಾದ ಸುಗುಣ ಆರ್ ಕೆ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...
error: Content is protected !!