Sunday, September 22, 2024
Sunday, September 22, 2024

ಲಕ್ಷ್ಮೀನಗರ ರಿಕ್ಷಾ ನಿಲ್ದಾಣಕ್ಕೆ ‘ಸೋಲಾರ್ ದೀಪ’ ಅಳವಡಿಕೆ

ಲಕ್ಷ್ಮೀನಗರ ರಿಕ್ಷಾ ನಿಲ್ದಾಣಕ್ಕೆ ‘ಸೋಲಾರ್ ದೀಪ’ ಅಳವಡಿಕೆ

Date:

ಉಡುಪಿ: ಕೊಡವೂರು ವಾರ್ಡಿನ ಲಕ್ಷ್ಮೀನಗರ ರಿಕ್ಷಾ ನಿಲ್ದಾಣದ ಸೋಲಾರ್ ದೀಪ ಉದ್ಘಾಟನಾ ಕಾರ್ಯಕ್ರಮ ನಗರಸಭಾ ಸದಸ್ಯ ವಿಜಯ ಕೊಡವೂರು ನೇತೃತ್ವದಲ್ಲಿ ಲಕ್ಷ್ಮೀನಗರ ರಿಕ್ಷಾ ನಿಲ್ದಾಣದಲ್ಲಿ ನಡೆಯಿತು.

ಕೆಲವು ತಿಂಗಳ ಹಿಂದೆ ಜನರ ಕುಂದು ಕೊರತೆಗಳನ್ನು ವಿಚಾರಿಸುವ ಸಂದರ್ಭದಲ್ಲಿ ಕೊಡವೂರಿನ ಲಕ್ಷ್ಮೀನಗರ ಆಟೋ ನಿಲ್ದಾಣದಲ್ಲಿ ಗ್ರಾಮ ಸಭೆಯನ್ನು ನಡೆಸಿದಾಗ ಸೋಲಾರ್ ದೀಪದ ಅವಶ್ಯಕತೆಯನ್ನು ಅಲ್ಲಿನ ರಿಕ್ಷಾ ಚಾಲಕರು ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿಯ ಗಮನಕ್ಕೆ ತಂದಿದ್ದರು.

ಈ ಕುರಿತು ದಾನಿಗಳ ನೆರವಿನಿಂದ ಲಕ್ಷ್ಮೀನಗರ ಆಟೋ ನಿಲ್ದಾಣಕ್ಕೆ ದಾನಿಗಳಾದ ‘ಕರಾವಳಿ ಕೋ ಆಪ್ ಕ್ರೆಡಿಟ್ ಸೊಸೈಟಿ ಸಂತೆಕಟ್ಟೆ, ಇವರ ನೆರವಿನಿಂದ ಸೋಲಾರ್ ದೀಪ ಅಳವಡಿಸಿ ಕೊಡಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕರಾವಳಿ ಕೋ ಆಪರೇಟಿವ್ ಸೊಸೈಟಿ ಸಂತೆಕಟ್ಟೆ ಅಧ್ಯಕ್ಷರಾದ ಉಮೇಶ್ ಶೆಟ್ಟಿ ನೆರವೇರಿಸಿದರು.

ಕರಾವಳಿ ಕೋ ಆಪರೇಟಿವ್ ಸೊಸೈಟಿ ಸಂತೆಕಟ್ಟೆ, ಉಪಾಧ್ಯಕ್ಷ ಉದಯ ಶೆಟ್ಟಿ, ನಿರ್ದೇಶಕರಾದ ಉದಯಕುಮಾರ್ ಶೆಟ್ಟಿ, ರಿಕ್ಷಾ ನಿಲ್ದಾಣ ಅಧ್ಯಕ್ಷರಾದ ನಾಗರಾಜ್, ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿಯ ಅಶೋಕ್ ಶೆಟ್ಟಿಗಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...
error: Content is protected !!