Tuesday, September 24, 2024
Tuesday, September 24, 2024

ಸಾಂಸ್ಕೃತಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಅಭಿವೃದ್ಧಿ: ಡಾ. ಸುಧಾಕರ್ ಶೆಟ್ಟಿ

ಸಾಂಸ್ಕೃತಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಅಭಿವೃದ್ಧಿ: ಡಾ. ಸುಧಾಕರ್ ಶೆಟ್ಟಿ

Date:

ಗಣಿತನಗರ: ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಗಣಿತನಗರ ಕ್ರೀಡಾಂಗಣದಲ್ಲಿ ನಡೆದ ೨೦೨೨-೨೩ನೇ ಸಾಲಿನ ವಾರ್ಷಿಕ ಸಾಂಸ್ಕೃತಿಕ ಉತ್ಸವ ‘ಜ್ಞಾನ ಸಂಭ್ರಮ -2022’ನ್ನು ದೇಜು ಮೈಂದನ್ ಕೊಡವೂರ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ, ಶಿಕ್ಷಣದ ಜೊತೆಗೆ ವಿದ್ಯಾರ್ಥಿಯಲ್ಲಿ ನಾಡು, ನುಡಿ, ಸಂಸ್ಕೃತಿ, ಆಚಾರ- ವಿಚಾರಗಳನ್ನು ಪರಿಚಯಿಸುವಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಬಹುಮುಖ್ಯ ಪಾತ್ರ ವಹಿಸುತ್ತದೆ. ಆಟ-ಪಾಠದ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರು ನೀಡುವ ಸಾಂಸ್ಕೃತಿಕ ಪ್ರೋತ್ಸಾಹದ ಕಾರ್ಯವು ಶ್ಲಾಘನೀಯ ಎಂದರು.

ವೇದಿಕೆಯಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಟ್ರಸ್ಟಿ ವಿದ್ಯಾವತಿ ಎಸ್.ಶೆಟ್ಟಿ, ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್. ಎಂ. ಕೊಡವೂರು, ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಡೀನ್ ಅಕಾಡೆಮಿಕ್ಸ್ ಡಾ. ಮಿಥುನ್ ಯು., ಡೀನ್ ಸ್ಟೂಡೆಂಟ್ಸ್ ಅಫರ್ಸ್ ಶಕುಂತಲಾ ಎಂ.ಸುವರ್ಣ, ಹಿತೈಷಿ ದೇವೇಂದ್ರ ನಾಯಕ್ ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಸಮಯದಲ್ಲಿ ಕಾವೇರಿ ಐದನೇ ಹಂತಕ್ಕೆ ಚಾಲನೆ: ಡಿಕೆಶಿ

ಬೆಂಗಳೂರು, ಸೆ.24: ಬೆಂಗಳೂರು ನಗರದ ಮೂಲೆ ಮೂಲೆಗೂ ಕಾವೇರಿ ನೀರನ್ನು ತಲುಪಿಸುವ...

ನೂತನ ಆ್ಯಂಬುಲೆನ್ಸ್‌ಗಳಿಗೆ ಚಾಲನೆ

ಬೆಂಗಳೂರು, ಸೆ.24: ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ ಅವರ್‌ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ...

ಸೆ.26: ಕೆಎಚ್‌ಐಆರ್‌ ಸಿಟಿ ಮೊದಲ ಹಂತಕ್ಕೆ ಚಾಲನೆ

ಬೆಂಗಳೂರು, ಸೆ.24: ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಸಂಶೋಧನಾ ಕೇಂದ್ರಗಳು ಒಂದೆಡೇ...

ಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಲು ಠಾಣೆಗಳಲ್ಲಿ ಪ್ರತ್ಯೇಕ ತಂಡ

ಬೆಂಗಳೂರು, ಸೆ.24: ಫೇಕ್‌ ನ್ಯೂಸ್‌ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ...
error: Content is protected !!