Friday, September 20, 2024
Friday, September 20, 2024

ಶ್ರೀ ಕಾಳಿಕಾಂಬಾ ಭಜನಾ ಸಂಘ: ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಸ್ಪರ್ಧೆ

ಶ್ರೀ ಕಾಳಿಕಾಂಬಾ ಭಜನಾ ಸಂಘ: ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಸ್ಪರ್ಧೆ

Date:

ತೆಂಕನಿಡಿಯೂರು: ಇಲ್ಲಿನ ಶ್ರೀ ಕಾಳಿಕಾಂಬಾ ಭಜನಾ ಸಂಘದ ವತಿಯಿಂದ ಜನವರಿ ೧೫ ರವಿವಾರ ಮಕರ ಸಂಕ್ರಾಂತಿ ವಿಶೇಷ ಕಾರ್ಯಕ್ರಮವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಉಡುಪಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

ಸ್ಪರ್ಧಾ ವಿವರಗಳು ಈ ಕೆಳಗಿನಂತಿವೆ:

ಉಡುಪಿ ಜಿಲ್ಲೆಯ ಹಿರಿಯ ಪ್ರಾಥಮಿಕ ಶಾಲೆಯ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಭಕ್ತಿಗೀತೆ ಸ್ಪರ್ಧೆ (ತಲಪಾಡಿ ಸರಳಾದೇವಿ ದತ್ತಿನಿಧಿ ಪ್ರಾಯೋಜಿತ) ಪ್ರಾಯೋಜಕರು: ಟಿ. ಸರಳಾದೇವಿ, ತಲಪಾಡಿ, ಮಂಗಳೂರು. ಚಿತ್ರಕಲಾ ಸ್ಪರ್ಧೆ (ಹೊಯಿಗೆತೋಟ ಲಕ್ಷ್ಮಣ ಆಚಾರ್ಯ ದತ್ತಿನಿಧಿ ಪ್ರಾಯೋಜಿತ) ಪ್ರಾಯೋಜಕರು: ಪಿ. ಎನ್. ಆಚಾರ್ಯ, ಮಣಿಪಾಲ. ಉಡುಪಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ (ಬೈಕಾಡಿ ಶಿವಯ್ಯ ಆಚಾರ್ಯ ದತ್ತಿನಿಧಿ ಪ್ರಾಯೋಜಿತ) ಪ್ರಾಯೋಜಕರು: ಬೈಕಾಡಿ ಜನಾರ್ದನ ಆಚಾರ್, ಮಂಗಳೂರು. ಭಾವಗಾನ ಸ್ಪರ್ಧೆ (ಕುಂಜಿಬೆಟ್ಟು ಜಲಜ ಸೋಮಯ್ಯಾಚಾರ್ಯ ದತ್ತಿನಿಧಿ ಪ್ರಾಯೋಜಿತ) ಪ್ರಾಯೋಜಕರು: ರತ್ನಾವತಿ ಜೆ. ಬೈಕಾಡಿ, ಮಂಗಳೂರು.

ಕಾಲೇಜು ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ (ಕೆ. ಬಂಟುಞ ಆಚಾರ್ಯ ದತ್ತಿನಿಧಿ ಪ್ರಾಯೋಜಿತ) ಪ್ರಾಯೋಜಕರು: ಕೆ. ಮುರಳೀಧರ್, ನಿವೃತ್ತ ತಹಶೀಲ್ದಾರರು. ಭಾಷಣ ಸ್ಪರ್ಧೆ (ಟಿ.ಕೃಷ್ಣಯ್ಯ ಆಚಾರ್ಯ ದತ್ತಿನಿಧಿ ಪ್ರಾಯೋಜಿತ) ವಿಷಯ:“ಸಮಕಾಲೀನ ಜಗತ್ತಿನಲ್ಲಿ ಗಾಂಧಿ ಚಿಂತನೆಗಳ ಪ್ರಸ್ತುತತೆ” (4+1 ನಿಮಿಷಗಳು) ಪ್ರಾಯೋಜಕರು: ಟಿ. ವಾದಿರಾಜ ಆಚಾರ್ಯ, ತೆಂಕನಿಡಿಯೂರು

ಆಸಕ್ತರು ಸ್ಪರ್ಧಾ ದಿನದಂದು ಬೆಳಗ್ಗೆ 09.00 ರಿಂದ 09.30 ಗಂಟೆಯ ಒಳಗೆ ಶಾಲಾ ಮುಖ್ಯಸ್ಥರ ದೃಢೀಕರಣದೊಂದಿಗೆ ನೋಂದಣಿ ಮಾಡಬೇಕು. ಪ್ರತಿ ಸ್ಪರ್ಧೆಗೆ ಒಂದು ಸಂಸ್ಥೆಯಿಂದ ಇಬ್ಬರು ವಿದ್ಯಾರ್ಥಿಗಳಿಗೆ, ಹಾಗೂ ರಸಪ್ರಶ್ನೆ ಸ್ಪರ್ಧೆಗಳಿಗೆ ಪ್ರತಿ ಸಂಸ್ಥೆಯಿಂದ ಇಬ್ಬರು ವಿದ್ಯಾರ್ಥಿಗಳನ್ನೊಳಗೊಂಡ ಒಂದು ತಂಡಕ್ಕೆ ಮಾತ್ರ ಅವಕಾಶ.

ಚಿತ್ರಕಲಾ ಸ್ಪರ್ಧೆಗೆ ವಿಷಯವನ್ನು ಸ್ಥಳದಲ್ಲೇ ನೀಡಲಾಗುವುದು. ಸ್ಪರ್ಧಾ ವಿಜೇತರಿಗೆ ಅದೇ ದಿನ ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ನಗದು ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂ. 9964024066 ನ್ನು ಸಂಪರ್ಕಿಸಬೇಕಾಗಿ ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!