Thursday, September 19, 2024
Thursday, September 19, 2024

ಪುರುಷರ ಕ್ರಿಕೆಟ್- ಎಸ್.ಎಂ.ಎಸ್ ಕಾಲೇಜಿಗೆ ಬಿ.ಸಿ ಆಳ್ವ ಮೆಮೋರಿಯಲ್ ರೋಲಿಂಗ್ ಟ್ರೋಫಿ

ಪುರುಷರ ಕ್ರಿಕೆಟ್- ಎಸ್.ಎಂ.ಎಸ್ ಕಾಲೇಜಿಗೆ ಬಿ.ಸಿ ಆಳ್ವ ಮೆಮೋರಿಯಲ್ ರೋಲಿಂಗ್ ಟ್ರೋಫಿ

Date:

ಬ್ರಹ್ಮಾವರ: ಬ್ರಹ್ಮಾವರ ಎಸ್.ಎಂ.ಎಸ್ ಕಾಲೇಜು ಮೈದಾನದಲ್ಲಿ ಬಿ.ಸಿ ಆಳ್ವ ಮೆಮೋರಿಯಲ್ ರೋಲಿಂಗ್ ಟ್ರೋಫಿಗಾಗಿ ಜರುಗಿದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಟ್ಟದ ಅಂತರ್ ವಲಯ ಪುರುಷರ ಕ್ರಿಕೆಟ್ ಪಂದ್ಯಾಟದಲ್ಲಿ ಎಸ್.ಎಂ.ಎಸ್ ಪದವಿ ಕಾಲೇಜು ಬ್ರಹ್ಮಾವರ, ಎಂ.ಪಿ.ಎಂ ಪ್ರಥಮ ದರ್ಜೆ ಕಾಲೇಜು ಕಾರ್ಕಳ ತಂಡವನ್ನು 38 ರನ್ನುಗಳ ಅಂತರದಿಂದ ಮಣಿಸಿ 11 ವರ್ಷಗಳ ನಂತರ ಬಿ.ಸಿ ಆಳ್ವ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಎಂ.ಪಿ.ಎಂ ಪ್ರಥಮ ದರ್ಜೆ ಕಾಲೇಜು ಕಾರ್ಕಳ ತಂಡವು ಅತಿಥೇಯ ಎಸ್.ಎಂ.ಎಸ್ ತಂಡವನ್ನು 131ರನ್ನುಗಳಿಗೆ ನಿಯಂತ್ರಿಸಲು ಸಫಲವಾಯಿತಾದರೂ, ಎಸ್.ಎಂ.ಎಸ್ ಕಾಲೇಜಿನ ಬೌಲಿಂಗ್ ದಾಳಿಗೆ ಕೇವಲ 93 ರನ್ನುಗಳಿಗೆ ಆಲ್ ಔಟ್ ಆಯಿತು.

ಎಂ.ಪಿ.ಎಂ ಕಾಲೇಜು ಪರ ಧೀರಜ್ ನಾಲ್ಕು ವಿಕೆಟ್ ಪಡೆದರೆ, ಎಸ್.ಎಂ.ಎಸ್ ಕಾಲೇಜಿನ ನಿತೀಶ್ ಶೆಟ್ಟಿ 3 ವಿಕೆಟ್ ಪಡೆದರು. ಇತ್ತಂಡಗಳು ಸೆಮಿ ಫೈನಲ್ ನಲ್ಲಿ ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರ್ ಮಂಗಳೂರು ಹಾಗೂ ಎಸ್.ಡಿ.ಎಂ ಕಾಲೇಜು, ಮಂಗಳೂರು ತಂಡಗಳನ್ನು ಸೋಲಿಸಿ ಫೈನಲ್ ಗೆ ಪ್ರವೇಶಿಸಿದ್ದವು. ಇದರ ಜೊತೆಗೆ ಎಸ್.ಎಂ.ಎಸ್ ಕಾಲೇಜು ಬ್ರಹ್ಮಾವರ ತಂಡವು ಸತತ ಎರಡು ವರ್ಷ ಶಿರ್ವ ಲೆಸ್ಲಿ ರೋಲಿಂಗ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

ಪಂದ್ಯಾಕೂಟದ ಸಮಾರೋಪ ಸಮಾರಂಭದಲ್ಲಿ ಓ.ಎಸ್.ಸಿ ಎಜ್ಯುಕೇಷನಲ್ ಸೊಸೈಟಿಯ ಅಧ್ಯಕ್ಷರಾದ ರೆ.ಫಾ.ಎಮ್.ಸಿ ಮಥಾಯ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಓ.ಎಸ್.ಸಿ ಎಜ್ಯುಕೇಷನಲ್ ಸೊಸೈಟಿಯ ಕಾಲೇಜು ವಿಭಾಗದ ಕಾರ್ಯದರ್ಶಿಯವರಾದ ಸಿರಿಲ್ ಪಿ ಡಿ’ಸೋಜ, ಕೋಶಾಧಿಕಾರಿಯಾದ ಸ್ಯಾಂಸನ್ ಡಿ’ಸೋಜ, ಓ.ಎಸ್.ಸಿ ಎಜ್ಯುಕೇಷನಲ್ ಸೊಸೈಟಿಯ ಕಮಿಟಿ ಸದಸ್ಯರಾದ ಲವಿನಾ ಲೂವಿಸ್, ಎಸ್.ಎಂ.ಎಸ್ ಸಿ.ಬಿ.ಎಸ್.ಇ ಶಾಲೆಯ ಮಾಜಿ ಕೋಶಧಿಕಾರಿ ಅಲ್ವಿನ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ್ ಉಡುಪ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ವೆಂಕಟೇಶ್ ಭಟ್, ವಿದ್ಯಾರ್ಥಿ ಕ್ರೀಡಾ ಕಾರ್ಯದರ್ಶಿ ಏರನ್ ರೋಚ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!