Thursday, September 19, 2024
Thursday, September 19, 2024

ಚೈತನ್ಯ ಯುವಕ ಮಂಡಲದ ವಾರ್ಷಿಕೋತ್ಸವ

ಚೈತನ್ಯ ಯುವಕ ಮಂಡಲದ ವಾರ್ಷಿಕೋತ್ಸವ

Date:

ಬ್ರಹ್ಮಾವರ: ಚೈತನ್ಯ ಯುವಕ ಮಂಡಲ (ರಿ.) ನೀಲಾವರ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ನಡೆಸಲಾದ ಪ್ರತಿಭಾ ಪುರಸ್ಕಾರದ ಭಾಗವಾಗಿ ನೀಲಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸ್ತವ್ಯವಿದ್ದು ಕನ್ನಡ ಮಾಧ್ಯಮದಲ್ಲಿ ಗ್ರಾಮಕ್ಕೆ ಅತೀ ಹೆಚ್ಚು ಅಂಕಗಳನ್ನು ಗಳಿಸಿದ ಧನುಶ್ರೀ ಇವರಿಗೆ ಚೈತನ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಕುಮಾರ್, ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಯುವಜನತೆ ಮೈಗೂಡಿಸಿಕೊಳ್ಳಬೇಕು ಎಂದರು. ನ್ಯಾಯವಾದಿ ಬೈಕಾಡಿ ಸುಪ್ರಸಾದ ಶೆಟ್ಟಿ ಮಾತನಾಡಿ, ಯುವಜನತೆ ಇತ್ತೀಚಿನ ದಿನಗಳಲ್ಲಿ ಮಾದಕ ವ್ಯಸನಿಗಳಾಗುತ್ತಿರುವ ಕುರಿತಾಗಿ ಆತಂಕ ವ್ಯಕ್ತಪಡಿಸಿದರು. ನೀಲಾವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಘುರಾಮ ಮದ್ಯಸ್ಥ ಮಾತನಾಡಿ, ಯುವಜನತೆ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲ್ಲಿ ರಾಷ್ಟ್ರನಿರ್ಮಾಣದ ಕಾರ್ಯ ಶೀಘ್ರ ನೆರವೇರಲಿದೆಯೆಂದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಸುಧೀರ್ ಕುಮಾರ್ ಶೆಟ್ಟಿ, ಅನುಪ್ ಶೆಟ್ಟಿ, ಯುವಕ ಮಂಡಲದ ಗೌರವಾಧ್ಯಕ್ಷ ಮಂಜುನಾಥ ಶೆಟ್ಟಿಗಾರ್, ಅಧ್ಯಕ್ಷ ಶ್ಯಾಮರಾಯ ಆಚಾರ್ಯ, ಕಾರ್ಯದರ್ಶಿ ಹರೀಶ್ ಆಚಾರ್ಯ, ಸಾಂಸ್ಕೃತಿಕ ಸಂಘಟಕ ಪುರುಷೋತ್ತಮ ಉಪಸ್ಥಿತರಿದ್ದರು.

ಪ್ರಶಾಂತ್ ನೀಲಾವರ ಯುವಕ ಮಂಡಲದ ವಾರ್ಷಿಕ ವರದಿ ವಾಚಿಸಿದರು. ಮಧುಸೂದನ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ಮನರಂಜನೆಯಾಗಿ ಕಾಂತಾರ ಚಲನಚಿತ್ರವನ್ನು ಎಲ್.ಇ.ಡಿ. ಪರದೆಯ ಮೇಲೆ ಪ್ರದರ್ಶಿಸಲಾಯಿತು. 400 ಕ್ಕೂ ಹೆಚ್ಚು ಗ್ರಾಮಸ್ಥರು ಚಲನಚಿತ್ರ ವೀಕ್ಷಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!