Thursday, September 19, 2024
Thursday, September 19, 2024

ಸಮಯ ಪರಿಪಾಲನೆಯೊಂದಿಗೆ ಸತತ ಅಧ್ಯಯನ ನಡೆಸಿ: ಡಾ. ವಿರೂಪಾಕ್ಷ ದೇವರಮನೆ

ಸಮಯ ಪರಿಪಾಲನೆಯೊಂದಿಗೆ ಸತತ ಅಧ್ಯಯನ ನಡೆಸಿ: ಡಾ. ವಿರೂಪಾಕ್ಷ ದೇವರಮನೆ

Date:

ಕುಂದಾಪುರ, ಜ.26: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ. ಎಂ. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಫಿನಿಶಿಂಗ್ ಟಚ್: ಪೋಷಕ- ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆಯವರು ಮಾತನಾಡಿ, ಪ್ರೌಢಶಾಲಾ ಹಂತದ ಕೊನೆ ಘಟ್ಟ ಎಸ್.ಎಸ್.ಎಲ್. ಸಿ. ಆದರೆ, ಇದು ಭವಿಷ್ಯದ ಹಾದಿಯಲ್ಲಿ ವಿದ್ಯಾರ್ಥಿಗಳು ಹೊಸ ಹೆಜ್ಜೆ ಇಡುವ ಹೊಸ ಪರ್ವದ ಕಾಲ.

ಈ ಕಾಲದಲ್ಲಿ ವಿದ್ಯಾರ್ಥಿಗಳು ಸಮಯ ಪರಿಪಾಲನೆಯೊಂದಿಗೆ ಸತತ ಪರಿಶ್ರಮದಿಂದ ಅಧ್ಯಯನ ನಡೆಸುವಂತೆ ಪ್ರೋತ್ಸಾಹಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯವಾದದ್ದು. ಮಕ್ಕಳಿಗೆ ಬೆನ್ನೆಲುಬಾಗಿ ಪೋಷಕರು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಿದ್ದೇ ಆದಲ್ಲಿ ಯಶಸ್ಸು ಶತಸಿದ್ದ ಎಂದರು.

ಶಾಲಾ ಪ್ರಾಂಶುಪಾಲೆ ಚಿಂತನಾ ರಾಜೇಶ್ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್., ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಜಗದೀಶ್ ಆಚಾರ್ ಸಾಸ್ತಾನ ಉಪಸ್ಥಿತರಿದ್ದರು. ಶಿಕ್ಷಕಿ ಗೀತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...
error: Content is protected !!