Thursday, September 19, 2024
Thursday, September 19, 2024

ಜ.29: ‘ಶ್ರಮ ಏವ ಜಯತೇ’ ವಿನೂತನ ಕಾರ್ಯಕ್ರಮ

ಜ.29: ‘ಶ್ರಮ ಏವ ಜಯತೇ’ ವಿನೂತನ ಕಾರ್ಯಕ್ರಮ

Date:

ಮಂಗಳೂರು, ಜ. 29: ಮಂಗಳೂರಿನ ಸಮಾನ ಮನಸ್ಕ 3 ಮಂದಿ ಯುವಕರು ಸೇರಿಕೊಂಡು ಹುಟ್ಟು ಹಾಕಿದ ಸಂಸ್ಥೆ ಟೀಮ್ ಬ್ಲಾಕ್ ಎಂಡ್ ವೈಟ್ ಮಂಗಳೂರು, 2016ರಲ್ಲಿ ಮಂಗಳೂರು ಪುರಭವನದಲ್ಲಿ ಹಾಡು ಹುಟ್ಟಿದ ಸಮಯ ಎನ್ನುವ ವಿನೂತನ ಕಾರ್ಯಕ್ರಮದ ಮೂಲಕ ಉದ್ಘಾಟನೆಗೊಂಡಿತು.

ನಂತರದ ದಿನಗಳಲ್ಲಿ ತಂಡದ ಜೊತೆ ನೂರಾರು ಯುವಕರು ಸೇರಿಕೊಂಡರು. ಅನೇಕ ಸಮಾಜ ಗಣ್ಯರು ಸಹಕಾರ ನೀಡಿದರು. ಈ ಕಾರ್ಯಕ್ರಮದ ಯಶಸ್ಸು 2019 ರಲ್ಲಿ ಮತ್ತೊಂದು ವಿನೂತನ ಕಾರ್ಯಕ್ರಮ ಆಯೋಜಿಸಲು ಪ್ರೇರೆಪಿಸಿತು ಅದೇ ಅಮರ್ ಜವಾನ್. ದಕ್ಷಿಣಕ ನ್ನಡ ಜಿಲ್ಲೆಯಲ್ಲಿ ಈ ವರೆಗೆ ಹುತಾತ್ಮರಾದ ಯೋಧರ ಮನೆಯವರನ್ನು ಒಟ್ಟುಗೂಡಿಸಿ ಆಯೋಜಿಸಿದ ಭಾವನಾತ್ಮಕ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯ ವಿದ್ಯಾರ್ಥಿ ಸಮೂಹವು ಜೊತೆಯಾಗಿತ್ತು.

ಜನವರಿ 29 ರಂದು ಆದಿತ್ಯವಾರ ಸಂಜೆ 5ಕ್ಕೆ ಮಂಗಳೂರು ಪುರಭವನದಲ್ಲಿ ‘ಶ್ರಮ ಏವ ಜಯತೇ’ ಎನ್ನುವ ಕಾರ್ಯಕ್ರಮವನ್ನು ಆಯೋಜಿಸಲು ಸಿದ್ದವಾಗಿದೆ. ನಮ್ಮ ಸಮಾಜದ ನರನಾಡಿಯಂತಿರುವ ಶ್ರಮಿಕ ವರ್ಗವಿದೆ, ಇವರ ಸೇವೆಯಿಲ್ಲದೆ ಸಮಾಜವನ್ನು ಊಹಿಸಲು ಸಾಧ್ಯವಿಲ್ಲ. ಪ್ರಮುಖವಾಗಿ ಸ್ವಚ್ಛತಾ ಕರ್ಮಿಗಳು, ಲೈನ್ ಮ್ಯಾನ್, ಪೋಸ್ಟ್ ಮ್ಯಾನ್, ಸಾರಿಗೆ ಸಿಬ್ಬಂದಿಗಳು, ಸಂಚಾರಿ ಪೂಲೀಸರು, ಆರೋಗ್ಯ ಕಾರ್ಯಕರ್ತರು, ಸ್ಮಶಾನದಲ್ಲಿ ಕೆಲಸ ಮಾಡುವವರು ಹೀಗೆ ಅನೇಕರು.

ಇಂತಹ ನಗರ ರೂಪಕರನ್ನು ಗುರುತಿಸಿ ಇವರ ಸೇವೆಯ ಮೌಲ್ಯವನ್ನು ಗೌರವಿಸಬೇಕೆನ್ನುವ ಆಲೋಚನೆ ಈ ತಂಡದ್ದಾಗಿದೆ. ಅದರ ಜೊತೆಗೆ ಅವರಿಂದಲೇ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಬೇಕೆನ್ನುವ ಪ್ರಯತ್ನ ಕೂಡ ನಡೆಯಲಿದೆ. ವಿನೂತನ ಕಲ್ಪನೆಯೊಂದಿಗೆ ಈ ಕಾರ್ಯಕ್ರಮ ಮೂಡಿಬರಲಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!