Friday, September 20, 2024
Friday, September 20, 2024

ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್: ಸಚಿವ ಸುನಿಲ್ ಕುಮಾರ್

ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್: ಸಚಿವ ಸುನಿಲ್ ಕುಮಾರ್

Date:

ಉಡುಪಿ, ಫೆ. 1: ಕೇಂದ್ರ ಸರ್ಕಾರದ ಈ ಸಾಲಿನ ಬಜೆಟ್ ಭಾರತದ ಮಧ್ಯಮವರ್ಗದವರ ಪಾಲಿಗೆ ನೆಮ್ಮದಿಯ ನಿಟ್ಟುಸಿರು ಮೂಡಿಸಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಆತ್ಮನಿರ್ಭರ ಭಾರತವು ಮೇಕ್ ಇನ್ ಇಂಡಿಯಾ ಜೊತೆ ಸಾಗಲು ಈ ಬಜೆಟ್ ಪೂರಕವಾಗಿದೆ.

ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂಪಾಯಿ 5 ಸಾವಿರ ಕೋಟಿ ಒದಗಿಸಿರುವುದು ಮಧ್ಯ ಕರ್ನಾಟಕದ ಜನತೆಗೆ ದೊಡ್ಡ ಕೊಡುಗೆಯಾಗಿದೆ. ಮತ್ಸ್ಯ ಸಂಪದ ಯೋಜನೆಗೆ ರೂ. 6000 ಕೋಟಿಯನ್ನು ಒದಗಿಸಿರುವುದು ಭಾರತೀಯ ಮತ್ಸ್ಯೋದ್ಯಮದ ಬೆಳವಣಿಗೆಗೆ ಅತ್ಯಂತ ಪೂರಕವಾಗಿದ್ದು ಮೀನುಗಾರರ ಬದುಕನ್ನು ಮತ್ತಷ್ಟು ಹಸನುಗೊಳಿಸಲಿದೆ.

ರಾಷ್ಟ್ರೀಯ ಹಸಿರು ಇಂಧನಕ್ಕೆ ರೂ. 19700 ಕೋಟಿ ನೀಡಿರುವುದು ಹಾಗೂ 2030ರ ವೇಳೆಗೆ 5 ಎಂ.ಎಂ.ಟಿ ಹಸಿರು ಹೈಡ್ರೋಜನ್ ಉತ್ಪಾದನೆಯ ಗುರಿಯನ್ನು ನಿಗದಿಪಡಿಸಿರುವುದು, ಹಸಿರು ಇಂಧನದಲ್ಲಿ ಭಾರತ ಸ್ವಾವಲಂಬನೆಯತ್ತ ಸಾಗಲು ಪೂರಕವಾಗಿದೆ ಎಂದು ಸಚಿವ ವಿ. ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!