Home ಸುದ್ಧಿಗಳು ಪ್ರಾದೇಶಿಕ ಮಲಬಾರ್ ವಿಶ್ವರಂಗ ಪುರಸ್ಕಾರ-2023ಕ್ಕೆ ಐವರು ಹಿರಿಯ ರಂಗಕರ್ಮಿಗಳು

ಮಲಬಾರ್ ವಿಶ್ವರಂಗ ಪುರಸ್ಕಾರ-2023ಕ್ಕೆ ಐವರು ಹಿರಿಯ ರಂಗಕರ್ಮಿಗಳು

636
0

ಉಡುಪಿ, ಮಾ. 1: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರಧಾನ ಮಾಡುತ್ತಿರುವ ‘ಮಲಬಾರ್ ವಿಶ್ವರಂಗ ಪುರಸ್ಕಾರ 2023ಕ್ಕೆ’ ರಾಜ್ಯ ಮತ್ತು ಹೊರ ರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆಯಾಗಿದ್ದಾರೆ.

ಮೂರ್ತಿ ದೇರಾಜೆ (ರಂಗ ನಿರ್ದೇಶಕರು), ಶೋಭಾ ವೆಂಕಟೇಶ್, ಬೆಂಗಳೂರು (ಮಕ್ಕಳ ರಂಗಭೂಮಿ), ಎಂ.ಎಸ್. ಭಟ್ ಉಡುಪಿ (ರಂಗ ನಟ), ಮೋಹನ್ ಮಾರ್ನಾಡ್ ಮುಂಬೈ (ರಂಗ ನಟ ಹೊರ ರಾಜ್ಯ), ಪ್ರಕಾಶ್ ನೊರೋನ್ಹ ಪಾಂಬೂರು (ರಂಗ ಸಂಘಟಕರು) ಇವರಿಗೆ ಮಾರ್ಚ್ 26 ರಂದು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ ವಿಶ್ವ ರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ-2023’ ಪ್ರಧಾನ ಮಾಡಲಾಗುವುದು ಎಂದು ಮಲಬಾರ್ ವಿಶ್ವರಂಗ ಪುರಸ್ಕಾರ ಸಮಿತಿಯ ಸಂಚಾಲಕರಾದ ರಾಜೇಶ್ ಭಟ್ ಪಣಿಯಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.