Saturday, September 21, 2024
Saturday, September 21, 2024

ಹಣಕಾಸು ಸಾಕ್ಷರತೆ ಮುಖ್ಯ: ಲತೇಶ್ ಬಿ

ಹಣಕಾಸು ಸಾಕ್ಷರತೆ ಮುಖ್ಯ: ಲತೇಶ್ ಬಿ

Date:

ವಿದ್ಯಾಗಿರಿ, ಮಾ. 3: ನಾವೆಲ್ಲಾ ಅಕ್ಷರ ಜ್ಞಾನವುಳ್ಳವರು. ಆದರೆ ಕೇವಲ ಅಕ್ಷರ ಜ್ಞಾನ ಇದ್ದರೆ ಸಾಕಾಗುವುದಿಲ್ಲ. ಅಕ್ಷರ ಜ್ಞಾನ ಇಲ್ಲದವರೂ ಹಣಕಾಸು ಸಾಕ್ಷರತೆ ಹೊಂದಿರುವುದು ಮುಖ್ಯ ಎಂದು ಮಂಗಳೂರಿನ ಹಣಕಾಸು ಸಾಕ್ಷರತೆಯ ಸಮಾಲೋಚಕ ಲತೇಶ್ ಬಿ ಹೇಳಿದರು. ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ವಿಭಾಗದ ಸ್ಪಟಿಕ ವೇದಿಕೆ ಅಡಿಯಲ್ಲಿ ನಡೆದ ಹಣಕಾಸು ಸಾಕ್ಷರತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದು ವಿಮೆ, ಪಿಂಚಣಿ, ಸರ್ಕಾರದ ಅನೇಕ ಸೌಲಭ್ಯಗಳು, ಹಣಕಾಸಿನ ವ್ಯವಹಾರಗಳು ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿವೆ. ಡಿಜಿಟಲ್ ಬ್ಯಾಂಕಿಂಗ್ ಇಂದಿನ ಅನಿವಾರ್ಯ. ಗೂಗಲ್ ಪೇ, ಫೋನ್ ಪೇ, ಪೆಟಿಎಮ್ ಮೂಲಕ ಜನರು ಸುಲಭವಾಗಿ ವ್ಯವಹಾರ ಮಾಡಬಹುದು. ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ ಮಾನ್ಯತೆ ಹೊಂದಿರುವ ಬ್ಯಾಂಕುಗಳಲ್ಲಿ ಮಾತ್ರ ನಿಮ್ಮ ಹಣದ ವ್ಯವಹಾರ ಇರಲಿ ಎಂದು ಅವರು ಸಲಹೆ ನೀಡಿದರು.

ಉನ್ನತ ಶಿಕ್ಷಣಕ್ಕೆ, ಕೃಷಿ ಅಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆಗಳನ್ನು, ಜಾರಿಗೆ ತರುತ್ತಿದೆ. ಅವೆಲ್ಲವುಗಳ ಸದುಪಯೋಗವನ್ನು ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು. ವಿಭಾಗದ ಮುಖ್ಯಸ್ಥೆ ಡಾ. ಮಧುಮಲಾ ಕೆ. ಇದ್ದರು. ಅನ್ವಿತಾ ಜೈನ್ ಸ್ವಾಗತಿಸಿ, ಉತ್ತಮಕುಮಾರ್ ವಂದಿಸಿದರು. ಅರ್ಪಿತಾ ಜೈನ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!