Friday, September 20, 2024
Friday, September 20, 2024

ಮಂಗಳೂರು ವಿ. ವಿ. ಅಂತರ್ ಕಾಲೇಜು ಯಕ್ಷಗಾನ ಸ್ಪರ್ಧೆ: ಡಾ. ಬಿ. ಬಿ. ಹೆಗ್ಡೆ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಮಂಗಳೂರು ವಿ. ವಿ. ಅಂತರ್ ಕಾಲೇಜು ಯಕ್ಷಗಾನ ಸ್ಪರ್ಧೆ: ಡಾ. ಬಿ. ಬಿ. ಹೆಗ್ಡೆ ಕಾಲೇಜಿಗೆ ಸಮಗ್ರ ಪ್ರಶಸ್ತಿ

Date:

ಕುಂದಾಪುರ, ಏ.10: ಗೋವಿಂದದಾಸ ಕಾಲೇಜು ಸುರತ್ಕಲ್‌ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ ಕಾಲೇಜು ಯಕ್ಷಗಾನ ಸ್ಪರ್ಧೆಯಲ್ಲಿ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶಿಸಿದ ‘ಶಶಿಪ್ರಭಾ ಪರಿಣಯ’ ಪ್ರಸಂಗ ಸಮಗ್ರ ಪ್ರಶಸ್ತಿ ಪಡೆದಿದೆ. ತಂಡದಲ್ಲಿ ಭ್ರಮರಕುಂತಳೆ ಪಾತ್ರಧಾರಿ ಪ್ರಥಮ ಬಿ.ಸಿ.ಎ. ಪೂಜಾ ಆಚಾರ್ ತೆಕ್ಕಟ್ಟೆ, ಮಾರ್ತಾಂಡತೇಜ ಪಾತ್ರಧಾರಿ ಅಂತಿಮ ಬಿ.ಕಾಂ. ಡಿ. ವಿಭಾಗದ ಶ್ರೀನಿಧಿ ಖಾರ್ವಿ, ಹಾಸ್ಯ ಪಾತ್ರಧಾರಿ ದ್ವಿತೀಯ ಬಿ.ಎಸ್ಸಿ.ಯ ಲಕ್ಷ್ಮೀಕಾಂತ್ ಶೆಟ್ಟಿ ವೈಯಕ್ತಿಕ ಪ್ರಶಸ್ತಿ ಪಡೆದರು.

ಉಳಿದಂತೆ ಮುಮ್ಮೇಳದಲ್ಲಿ ವಿದ್ಯಾರ್ಥಿಗಳಾದ ಪವಿತ್ರ ಪೈ., ಅಂಕಿತಾ ಸಿ. ಶೇಟ್, ಶ್ವೇತಾ ಪೂಜಾರಿ, ನಿಖಿಲ್ ಬಾರಾಳಿ, ಭರತ್ ಶೆಟ್ಟಿಗಾರ್, ದರ್ಶನ್ ಕುಮಾರ್ ಶೆಟ್ಟಿ, ಗುರುರಾಜ್ ಭಾಗವಹಿಸಿದ್ದರು. ಹಿಮ್ಮೇಳದಲ್ಲಿ ಭಾಗವತರಾಗಿ ಗಣೇಶ್ ಆಚಾರ್ ಬಿಲ್ಲಾಡಿ, ಚಂಡೆಯಲ್ಲಿ ಶಶಾಂಕ್ ಆಚಾರ್ಯ ಕಿರಿಮಂಜೇಶ್ವರ, ಮದ್ದಳೆಯಲ್ಲಿ ಅಕ್ಷಯ್ ಆಚಾರ್ ಬಿದ್ಕಲ್‌ಕಟ್ಟೆ ಸಹಕರಿಸಿದರು. ಯಕ್ಷಗುರು ಐರೋಡಿ ಮಂಜುನಾಥ್ ಕುಲಾಲ್, ಉಪನ್ಯಾಸಕಿ ಸುಶ್ಮಿತಾ ಸಾಲಿಗ್ರಾಮ ತರಬೇತಿ ನೀಡಿದ್ದರು.

ಕಾಲೇಜಿನ ಅಧ್ಯಕ್ಷರಾದ ಬಿ. ಎಂ. ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಹಾಗೂ ಬೋಧಕ-ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!