Friday, September 20, 2024
Friday, September 20, 2024

ಮಕ್ಕಳಲ್ಲಿ ಆತ್ಮಸ್ಥೆರ್ಯ ತುಂಬುವ ಕೆಲಸವಾಗಬೇಕು: ರಾಜೇಶ್ ಬಿ

ಮಕ್ಕಳಲ್ಲಿ ಆತ್ಮಸ್ಥೆರ್ಯ ತುಂಬುವ ಕೆಲಸವಾಗಬೇಕು: ರಾಜೇಶ್ ಬಿ

Date:

ಕೋಟ, ಏ. 25: ಮಕ್ಕಳಲ್ಲಿ ಆತ್ಮಸಥೆರ್ಯ ತುಂಬುವ ಕೆಲಸವಾಗಬೇಕು. ಅವರಲ್ಲಿನ ದೌರ್ಬಲ್ಯವನ್ನು ಗುರುತಿಸಿ ಎಲ್ಲ ಚಟುವಟಿಗಳಲ್ಲೂ ಮುಕ್ತವಾಗಿ ಭಾಗವಹಿಸುವಂತೆ ಪ್ರೇರೇಪಿಸಬೇಕು. ಭವ್ಯ ಭಾರತದ ಶಿಲ್ಪಿಗಳು ಮಕ್ಕಳು, ಅವರನ್ನು ಸರ್ವತೋಮುಖ ಬೆಳವಣಿಗೆಗೆ ಹೊಂದುವಂತೆ ಮಾಡುವ ಇಂತಹ ಬೇಸಿಗೆ ಶಿಬಿರದ ಆಯೋಜನೆ ಶ್ಲಾಘನೀಯ ಎಂದು ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷರಾದ ರಾಜೇಶ್ ಬಿ ಹೇಳಿದರು.

ಅವರು ಯುವವಾಹಿನಿ(ರಿ.) ಯಡ್ತಾಡಿ ಘಟಕ ಆಶ್ರಯದಲ್ಲಿ ಸ.ಹಿ.ಪ್ರಾ ಶಾಲೆ ಯಡ್ತಾಡಿ, ಜೆ.ಸಿ.ಐ ಕಲ್ಯಾಣಪುರ, ಚಿಗುರು ಕಲಾ-ಸಾಂಸ್ಕೃತಿಕ ವೇದಿಕೆ ನಡೂರು, ಜೆ.ಪಿ ನಾರಾಯಣ ಸ್ವಾಮಿ ಫೌಂಡೇಶನ್ ಬ್ರಹ್ಮಾವರ, ರೋಟರಿ ಕ್ಲಬ್ ಬಾರ್ಕೂರು, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ ಶಿರಿಯಾರ, ಸ್ವಾಗತ್ ವಿವಿಧೋದ್ದೇಶ ಸಹಕಾರಿ ಸಂಘ ಬಾರ್ಕೂರು, ಸೌಜನ್ಯ ಯುವಕ ಮಂಡಲ (ರಿ.) ಯಡ್ತಾಡಿ, ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾಯ್ಬ್ರಕಟ್ಟೆ –ಯಡ್ತಾಡಿ, ಅತುಲ ಯುವಕ ಸಂಘ(ರಿ.) ಹೇರಾಡಿ, ಇವರ ಸಹಯೋಗದಲ್ಲಿ ನಡೆಯುತ್ತಿರುವ ಮಕ್ಕಳ ಬೇಸಿಗೆ ಶಿಬಿರ ವಿಕಸನ- 2023(ತಿಳಿವಿನ ಬೆಳಕು) ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ(ರಿ.) ಯಡ್ತಾಡಿ ಘಟಕದ ಅಧ್ಯಕ್ಷ ರಮೇಶ್ ಪೂಜಾರಿ ವಹಿಸಿದ್ದರು. ವೇದಿಕೆಯಲ್ಲಿ ಯುವವಾಹಿನಿ ವ್ಯಕ್ತಿತ್ವ ವಿಕಸನ ನಿರ್ದೇಶಕ ದೇವರಾಜ್ ಅಮೀನ್, ಶಿಬಿರದ ನಿರ್ದೇಶಕ ನರೇಂದ್ರ ಕುಮಾರ್ ಕೋಟ, ಸ.ಹಿ.ಪ್ರಾ ಶಾಲೆ ಯಡ್ತಾಡಿ ಮುಖ್ಯೋಪಾಧ್ಯಾಯರಾದ ರಾಜಶೇಖರ್ ಶೆಟ್ಟಿ, ಜೆ.ಸಿ.ಐ ಕಲ್ಯಾಣಪುರ ಅಧ್ಯಕ್ಷೆ ಅನಿತಾ ನರೇಂದ್ರ ಕುಮಾರ್, ಯುವವಾಹಿನಿ ಯಡ್ತಾಡಿ ಘಟಕದ ಕಾರ್ಯದರ್ಶಿ ಅಜಿತ್ ಕುಮಾರ್, ಸಂಪನ್ಮೂಲ ವ್ಯಕ್ತಿ ಸತೀಶ್ ವಡ್ಡರ್ಸೆ, ಸಾಂಸ್ಕೃತಿಕ ಚಿಂತಕ ಅಲ್ತಾರು ನಾಗರಾಜ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!