Saturday, September 21, 2024
Saturday, September 21, 2024

ಜೆಇಇ ಮೈನ್ ಫಲಿತಾಂಶ: ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಜೆಇಇ ಮೈನ್ ಫಲಿತಾಂಶ: ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

Date:

ಕಾರ್ಕಳ, ಏ. 29: ರಾಷ್ಟ್ರಮಟ್ಟದಲ್ಲಿ ನಡೆಯುವ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ ಮೈನ್ 2ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಪ್ರಣವ್ ಗುಜ್ಜರ್ ಭೌತಶಾಸ್ತ್ರದಲ್ಲಿ 100 ಪರ್ಸಂಟೈಲ್ ಪಡೆಯುವುದರ ಜೊತೆಗೆ, ಗಣಿತಶಾಸ್ತ್ರದಲ್ಲಿ 99.5756 ಪರ್ಸಂಟೈಲ್ ಮತ್ತು ರಸಾಯನಶಾಸ್ತ್ರದಲ್ಲಿ 99.3912 ಪರ್ಸಂಟೈಲ್‌ನೊಂದಿಗೆ ಒಟ್ಟು 99.8421730 ಪರ್ಸಂಟೈಲ್ ಗಳಿಸಿಕೊಂಡು ಉತ್ತಮ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳಾದ ಪ್ರಣವ್ ಗುಜ್ಜರ್ 99.84217 ಪರ್ಸಂಟೈಲ್, ಶ್ರೇಯಸ್ ಆರ್ ಗೌಡ 98.89945 ಪರ್ಸಂಟೈಲ್, ಧನ್ವಿತ್ ನಾಯಕ್ 98.8703 ಪರ್ಸಂಟೈಲ್, ಸಮೃದ್ಧ್ ನೆಲ್ಲಿ 98.84006 ಪರ್ಸಂಟೈಲ್, ಅರ್ಹನ್ ಎ.ಕೆ 98.60173 ಪರ್ಸಂಟೈಲ್, ಧ್ರುವ ಪಿ.ಬಿ 98.57012 ಪರ್ಸಂಟೈಲ್, ಅಮೃತ್ ಗೌಡ ಪಾಟೀಲ್ 98.53126 ಪರ್ಸಂಟೈಲ್, ರೋಹಿತ್ ಹೆಗ್ಡೆ 98.34645 ಪರ್ಸಂಟೈಲ್, ಚೇತನ್ ಸಿ ಪಾಟೀಲ್ 98.22345 ಪರ್ಸಂಟೈಲ್ ಪಡೆದಿರುತ್ತಾರೆ.

ಜ್ಞಾನಸುಧಾದ ಒಟ್ಟು 9 ವಿದ್ಯಾರ್ಥಿಗಳು 98 ಪರ್ಸಂಟೈಲ್‌ಗಿಂತ ಅಧಿಕ, 45 ವಿದ್ಯಾರ್ಥಿಗಳು 95 ಪರ್ಸಂಟೈಲ್‌ಗಿಂತ ಅಧಿಕ ಹಾಗೂ 97 ವಿದ್ಯಾರ್ಥಿಗಳು 90ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ. ಒಟ್ಟು 126 ವಿದ್ಯಾರ್ಥಿಗಳು ಐಐಟಿ ಪರೀಕ್ಷೆಯಾದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಗಿಟ್ಟಿಸಿಕೊಂಡಿರುತ್ತಾರೆ. ಈ ಹಿಂದೆ 2020-21 ಮತ್ತು 2021-22ರ ಜೆಇಇ ಮೈನ್ ಅಂತಿಮ ಫಲಿತಾಂಶದಲ್ಲಿಯೂ ಜ್ಞಾನಸುಧಾದ ಐವರು ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಸಾಧನೆಗೆ ಬೆನ್ನೆಲುಬಾದ ಜ್ಞಾನಸುಧಾ ಎಂಟ್ರನ್ಸ್ ಅಕಾಡೆಮಿಯಾ ಪರಿಶ್ರಮವನ್ನು ಶ್ಲಾಘಿಸಿ ಎಲ್ಲರನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!