Friday, September 20, 2024
Friday, September 20, 2024

ಕೆಎಂಸಿ ಮಣಿಪಾಲದಲ್ಲಿ ವೈದ್ಯಕೀಯ ತಳಿಶಾಸ್ತ್ರ ವಿಭಾಗದ ಉದ್ಘಾಟನೆ

ಕೆಎಂಸಿ ಮಣಿಪಾಲದಲ್ಲಿ ವೈದ್ಯಕೀಯ ತಳಿಶಾಸ್ತ್ರ ವಿಭಾಗದ ಉದ್ಘಾಟನೆ

Date:

ಮಣಿಪಾಲ, ಜೂನ್ 3: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ತಳಿಶಾಸ್ತ್ರ ವಿಭಾಗವು (ಮೆಡಿಕಲ್ ಜೆನೆಟಿಕ್ಸ್) ತನ್ನ ಹೊಸ ಸೌಲಭ್ಯಗಳೊಂದಿಗೆ ಉದ್ಘಾಟನೆಗೊಂಡಿತು. ಇದು ಶಿಕ್ಷಣ, ಸಂಶೋಧನೆ ಮತ್ತು ರೋಗಿಗಳ ಆರೈಕೆಯ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. 12,000-ಚದರ ಅಡಿ ವಿಸ್ತೀರ್ಣದಲ್ಲಿರುವ ಈ ಸೌಲಭ್ಯವು ಶೈಕ್ಷಣಿಕ ಉತ್ಕೃಷ್ಟತೆ ಮತ್ತು ವೈದ್ಯಕೀಯ ತಳಿಶಾಸ್ತ್ರದಲ್ಲಿನ ನಾವೀನ್ಯತೆಗಾಗಿ ವಿಭಾಗದ ಸಮರ್ಪಣೆಯನ್ನು ಉದಾಹರಿಸುತ್ತದೆ. ಈ ವಿಭಾಗವು ಡಿಎಂ (ಮೆಡಿಕಲ್ ಜೆನೆಟಿಕ್ಸ್), ಎಂಎಸ್ಸಿ (ಜೆನೆಟಿಕ್ ಕೌನ್ಸೆಲಿಂಗ್), ಮತ್ತು ಡಾಕ್ಟರ್ ಆಫ್ ಫಿಲಾಸಫಿ ಪದವಿಗಳಂತಹ ವಿಶೇಷ ಕಾರ್ಯಕ್ರಮಗಳನ್ನು ನೀಡಲಿದೆ. ಎಂಎಸ್ಸಿ (ಜೆನೆಟಿಕ್ ಕೌನ್ಸೆಲಿಂಗ್) ಪಠ್ಯಕ್ರಮವು ಭಾರತದಲ್ಲಿ ಮೊದಲನೆಯದು, ಇದು ಜೆನೆಟಿಕ ಕೌನ್ಸೆಲೆರ್ ಗಳಿಗೆ ಕ್ಲಿನಿಕಲ್ ಜೆನೆಟಿಕ್ ತಜ್ಞರು ಮತ್ತು ವಿಜ್ಞಾನಿಗಳೊಂದಿಗೆ ಒಟ್ಟಾಗಿ ಕೆಲಸ ಮಾಡಲು ಅನುವು ಮಾಡಿಕೊಡಲಿದೆ. ಈ ಸೌಲಭ್ಯವು ಸಕಾಲಿಕ ಮತ್ತು ನಿಖರವಾದ ರೋಗನಿರ್ಣಯಕ್ಕಾಗಿ ರೋಗನಿರ್ಣಯ ಪ್ರಯೋಗಾಲಯವನ್ನು ಹೊಂದಿದೆ. ಹೆಚ್ಚುವರಿಯಾಗಿ, ಇದು ಸಂತಾನೋತ್ಪತ್ತಿ ಆಯ್ಕೆಗಳಿಗಾಗಿ ಆನುವಂಶಿಕ ಸಲಹೆಯನ್ನು ನೀಡುತ್ತದೆ ಮತ್ತು ಆನುವಂಶಿಕ ಸವಾಲುಗಳನ್ನು ಎದುರಿಸುತ್ತಿರುವ ಕುಟುಂಬಗಳಿಗೆ ಸಹಾಯ ಮಾಡಲು ಪ್ರಸವಪೂರ್ವ ರೋಗನಿರ್ಣಯ ಪತ್ತೆ ಮಾಡಲು ಸಹಕಾರಿಯಾಗಿದೆ.

ಚಿಕಿತ್ಸಕರು ಮತ್ತು ವಿಜ್ಞಾನಿಗಳೊಂದಿಗಿನ ಸಹಯೋಗಗಳು, ಅಣ್ವಿಕ ತಳಿಶಾಸ್ತ್ರ, ಕೋಶ ಜೀವಶಾಸ್ತ್ರ, ಬಯೋಇನ್ಫರ್ಮ್ಯಾಟಿಕ್ಸ್ ಮತ್ತು ಪೆರಿನಾಟಲ್ ಜೆನೆಟಿಕ್ಸ್‌ನಲ್ಲಿ ಅತ್ಯಾಧುನಿಕ ತಂತ್ರಗಳು ವಿಭಾಗದ ಸಂಶೋಧನಾ ಕಾರ್ಯಗಳಿಗೆ ಸಹಕಾರಿಯಾಗಿದೆ. ವೈದ್ಯಕೀಯ ಜೆನೆಟಿಕ್ಸ್ ವಿಭಾಗದ ಮುಖ್ಯಸ್ಥೆ ಪ್ರೊ. ಡಾ ಅಂಜು ಶುಕ್ಲಾ, ನಮ್ಮ ಹೊಸ ವಿಭಾಗದ ಆರಂಭದಿಂದ ನಾವು ತುಂಬಾ ಸಂತಸಗೊಂಡಿದ್ದೇವೆ. ಇದು ಶೈಕ್ಷಣಿಕ ಶ್ರೇಷ್ಠತೆ ಮತ್ತು ನಾವೀನ್ಯತೆಗೆ ನಮ್ಮ ಅಚಲವಾದ ಸಮರ್ಪಣೆಯನ್ನು ಪ್ರತಿನಿಧಿಸುತ್ತದೆ. ಈ ಸೌಲಭ್ಯವು ನಮ್ಮ ವಿದ್ಯಾರ್ಥಿಗಳು ಪ್ರವರ್ಧಮಾನಕ್ಕೆ ಬರುವಂತಹ ವಾತಾವರಣವನ್ನು ಬೆಳೆಸುತ್ತದೆ. ನಮ್ಮ ಅಧ್ಯಾಪಕರೂ ಸಹ ಅಧ್ಯಯನಗಳನ್ನು ನಡೆಸಬಹುದು ಮತ್ತು ಸಮುದಾಯದ ಸದಸ್ಯರು ಜ್ಞಾನ ಮತ್ತು ಆಲೋಚನೆಗಳನ್ನು ಹಂಚಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಾಹೆ ಮಣಿಪಾಲದ ಸಹ ಕುಲಪತಿ (ಆರೋಗ್ಯ ವಿಜ್ಞಾನ) ಡಾ. ಶರತ್ ಕೆ ರಾವ್ ಅವರು ಸೆಂಟ್ರಲ್ ರಿಸರ್ಚ್ ಲ್ಯಾಬ್‌ನಲ್ಲಿ ಹೊಸ ವಿಭಾಗದ ಆರಂಭದ ಬಗ್ಗೆ ಮಾತನಾಡಿದರು ಮತ್ತು ಸಂಶೋಧನೆ, ಬೋಧನೆ ಹಾಗೂ ರೋಗಿಗಳ ಆರೈಕೆಯಲ್ಲಿ ಅದರ ತ್ವರಿತ ಬೆಳವಣಿಗೆಯನ್ನು ಶ್ಲಾಘಿಸಿದರು. ಹೊಸ ಸೌಲಭ್ಯವು ವಿಭಾಗವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಒತ್ತಿ ಹೇಳಿದರು. ಮಾಹೆ ಕುಲಪತಿ ಲೆಫ್ಟಿನೆಂಟ್ ಕರ್ನಲ್ ಡಾ. ಎಂ ಡಿ ವೆಂಕಟೇಶ್ ಅವರು ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿ, ಸಂಶೋಧನೆ, ಬೋಧನೆ ಮತ್ತು ಅಭಿವೃದ್ಧಿ ಫಲಿತಾಂಶಗಳನ್ನು ಸುಧಾರಿಸಲು ಈ ಅತ್ಯಾಧುನಿಕ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಕರೆ ನೀಡಿದರು.

ವಿಶ್ವವಿದ್ಯಾನಿಲಯದಾದ್ಯಂತ ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುವ ವಿಭಾಗದ ಸಾಮರ್ಥ್ಯದ ಬಗ್ಗೆ ಅವರು ವಿಶ್ವಾಸ ವ್ಯಕ್ತಪಡಿಸಿದರು. ಕೆಎಂಸಿ ಮಣಿಪಾಲದ ಡೀನ್ ಡಾ. ಪದ್ಮರಾಜ್ ಹೆಗ್ಡೆ ಅವರು ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿ, ವೈದ್ಯಕೀಯ ಜೆನೆಟಿಕ್ಸ್ ವಿಭಾಗದ ಆರಂಭವು ನಮ್ಮ ಆರೋಗ್ಯ ಮತ್ತು ಸಂಶೋಧನೆಯ ಶ್ರೇಷ್ಠತೆಯ ಅನ್ವೇಷಣೆಯಲ್ಲಿ ಮಹತ್ವದ ಮೈಲಿಗಲ್ಲನ್ನು ಪ್ರತಿನಿಧಿಸುತ್ತದೆ. ಈ ಹೊಸ ಸೌಲಭ್ಯದಿಂದ ನಮ್ಮ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ ಅವರ ಪರಿಧಿಯನ್ನು ವಿಸ್ತರಿಸಲು ಮತ್ತು ವೈದ್ಯಕೀಯ ತಳಿಶಾಸ್ತ್ರದ ಕ್ಷೇತ್ರವನ್ನು ಮುನ್ನಡೆಸಲು ಸಾಧ್ಯವಾಗಲಿದೆ ಎಂದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!