Friday, September 20, 2024
Friday, September 20, 2024

ಸರಸ್ವತಿ ವಿದ್ಯಾಲಯದಲ್ಲಿ ದೃಷ್ಟಿ ಬಿಡುಗಡೆ

ಸರಸ್ವತಿ ವಿದ್ಯಾಲಯದಲ್ಲಿ ದೃಷ್ಟಿ ಬಿಡುಗಡೆ

Date:

ಗಂಗೊಳ್ಳಿ, ಜೂನ್ 8: ಬದುಕಿನಲ್ಲಿ ಬರವಣಿಗೆಯಷ್ಟು ಖುಷಿ ಕೊಡುವ ಮತ್ತೊಂದು ದೊರಕದು. ನೋವುಗಳನ್ನು ನಲಿವಾಗಿಸುವ ಶಕ್ತಿ ಸಾಹಿತ್ಯಕ್ಕಿದೆ. ಸೂಕ್ಷ್ಮ ಸಂವೇದನೆಯಲ್ಲಿ ಹುಟ್ಟಿಕೊಂಡ ಬರವಣಿಗೆ ಹೆಚ್ಚು ಪ್ರಬಲವಾಗಿರುತ್ತದೆ. ವಿದ್ಯಾರ್ಥಿ ಜೀವನದಲ್ಲಿಯೇ ಬರವಣಿಗೆಯ ಹವ್ಯಾಸಗಳನ್ನು ಬೆಳೆಸಿಕೊಂಡರೆ ಮುಂದೆ ಆ ವಿದ್ಯಾ ಸಂಸ್ಥೆ ನಿಮ್ಮ ಬಗೆಗೆ ಹೆಮ್ಮೆ ಪಡುವಂತಾಗುತ್ತದೆ ಎಂದು ಖ್ಯಾತ ಕತೆಗಾರರು, ಲಲಿತ ಪ್ರಬಂಧ ಬರಹಗಾರರು ಆಗಿರುವ ಸವಿತಾ ಮಾಧವ ಶಾಸ್ತ್ರಿ ಗುಂಡ್ಮಿ ಹೇಳಿದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ದೃಷ್ಟಿ ವಾರ್ಷಿಕ ಸಂಚಿಕೆ ಅನಾವರಣ ಮಾಡಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತ ಎಂ. ಸಿ. ಅಧ್ಯಕ್ಷತೆ ವಹಿಸಿದ್ದರು.

ಜಿ.ಎಸ್.ವಿ.ಎಸ್. ಅಸೋಸಿಯೇಷನ್ ಅಧ್ಯಕ್ಷರಾದ ಡಾ. ಕಾಶೀನಾಥ್ ಪೈ, ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಎನ್., ಸಂಪಾದಕ ಬಳಗದ ಥಾಮಸ್ ಪಿ.ಏ., ನಾರಾಯಣ ಇ ನಾಯ್ಕ್ ಉಪಸ್ಥಿತರಿದ್ದರು.
ಕಾರ್ಯನಿರ್ವಾಹಕ ಸಂಪಾದಕರಾದ ಉಪನ್ಯಾಸಕ ಸುಜಯೀಂದ್ರ ಹಂದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿಯರಾದ ಅನನ್ಯ ಪ್ರಾರ್ಥಸಿ, ನೇಹ ಸ್ವಾಗತಿಸಿ, ಶ್ರೇಯ ವಂದಿಸಿದರು. ವಸುಧಾ ಪರಿಚಯಿಸಿ, ನಿಶಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...
error: Content is protected !!