Friday, September 20, 2024
Friday, September 20, 2024

ನವದೆಹಲಿಯಲ್ಲಿ ಪುತ್ತಿಗೆ ಶ್ರೀಪಾದರಿಗೆ ಗುರುವಂದನೆ ಮತ್ತು ಪೌರಸನ್ಮಾನ

ನವದೆಹಲಿಯಲ್ಲಿ ಪುತ್ತಿಗೆ ಶ್ರೀಪಾದರಿಗೆ ಗುರುವಂದನೆ ಮತ್ತು ಪೌರಸನ್ಮಾನ

Date:

ಉಡುಪಿ, ಜೂನ್ 11: ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಉಡುಪಿ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯಪಟ್ಟದ ಶ್ರೀ ಸುಶ್ರೀ0ದ್ರ ತೀರ್ಥ ಶ್ರೀಪಾದಂಗಳವರಿಗೆ ನವದೆಹಲಿಯಲ್ಲಿ ಪೌರ ಸನ್ಮಾನ ನಡೆಸಲಾಯಿತು.

ವಿಶ್ವ ಹಿಂದೂ ಪರಿಷತ್ ಪ್ರಮುಖ ವೆಂಕಟಕೋಟೇಶ್ವರ ರಾವ್ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಉಪೇಂದ್ರರಾವ್ ಅಭಿನಂದನಾ ಭಾಷಣ ಮಾಡಿದರು.

ವಿಶ್ವ ಹಿಂದೂ ಪರಿಷತ್ತಿನ ಅಂತರರಾಷ್ಟ್ರೀಯ ಪ್ರಚಾರಕರಾದ ವಿಜ್ಞಾನಾಂದ ಸ್ವಾಮಿ ಮಹಾರಾಜ್ ಇವರು ಶ್ರೀಗಳ ಕಾರ್ಯವನ್ನು ಶ್ಲಾಘಿಸಿದರು. ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ನಿರ್ದೇಶಕರಾದ ಡಾ. ಈಶ್ವರ ವಿ ಬಸವರೆಡ್ಡಿ ಗೌಡೀಯ ವೈಷ್ಣವ ತತ್ವಪ್ರಚಾರಕರಾದ ಶ್ರೀಯಜ್ನೇಶ್ವರ ಪ್ರಭುಗಳು, ಪಂಜಾಬ್ ಮತ್ತು ಸಿಂದ್ ಬ್ಯಾಂಕಿನ ಮುಖ್ಯಸ್ಥರಾದ ರಾಘವೇಂದ್ರ ಕೊಳ್ಳೇಗಾಲ ಮುಂತಾದವರು ಉಪಸ್ಥಿತರಿದ್ದರು.

ದೆಹಲಿ ಭಕ್ತರು ಶ್ರೀಪಾದರಿಗೆ ಗೌರವಾರ್ಪಣೆ ಮಾಡಿದರು. ಕರ್ನಾಟಕ ಸಂಘ, ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ವತಿಯಿಂದ ಗೌರವಾರ್ಪಣೆ ನಡೆಯಿತು. ಶ್ರೀಪಾದರು ಸಂಸ್ಕೃತ ಇಂಗ್ಲಿಷ್ ಭಾಷೆಯಲ್ಲಿ ಉಪನ್ಯಾಸವಿತ್ತು ತಮ್ಮ ಪರ್ಯಾಯದ ಯೋಜನೆಯಾದ ಭಗವದ್ಗೀತೆಯ ವೈಶಿಷ್ಟ್ಯತೆಯನ್ನು ನಿರೂಪಿಸಿ ತಮ್ಮ ಚತುರ್ಥ ಪರ್ಯಾಯಕ್ಕೆ ಎಲ್ಲ ಭಗವದ್ಭಕ್ತರನ್ನು ಆಹ್ವಾನಿಸಿದರು. ಅನಿಲ್ ಕುಮಾರ್ ರಾಮಾಚಾರ್ ಸ್ವಾಗತಿಸಿ ವಂದಿಸಿದರು. ಬಿ. ಗೋಪಾಲಾಚಾರ್ಯ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!