Friday, September 20, 2024
Friday, September 20, 2024

ಸಿಇಟಿ ಫಲಿತಾಂಶ: ಕಾರ್ಕಳ ಕ್ರಿಯೇಟಿವ್‌ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಸಿಇಟಿ ಫಲಿತಾಂಶ: ಕಾರ್ಕಳ ಕ್ರಿಯೇಟಿವ್‌ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Date:

ಉಡುಪಿ, ಜೂನ್ 15: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 2023 ರಲ್ಲಿ ನಡೆಸಿದ ವಿವಿಧ ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಗಳಿಸಿ ರಾಜ್ಯದ ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹರಾಗಿದ್ದಾರೆ. ಜಾಗೃತಿ ಕೆ ಪಿ ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 17 ನೇ ರ‍್ಯಾಂಕ್‌, ಪಶು ವೈದ್ಯಕೀಯದಲ್ಲಿ 107ನೇ ರ‍್ಯಾಂಕ್‌, ಬಿ. ಎನ್‌ ವೈ ಎಸ್‌ ನಲ್ಲಿ 53 ನೇ ರ‍್ಯಾಂಕ್‌ ಹಾಗೂ ಇಂಜಿನಿಯರಿಂಗ್‌ ವಿಭಾಗದಲ್ಲಿ 112 ನೇ ರ‍್ಯಾಂಕ್‌ ಪಡೆದಿದ್ದಾರೆ. 
ಇಂಜಿನಿಯರಿಂಗ್‌ ವಿಭಾಗದಲ್ಲಿ ರಾಜ್ಯಕ್ಕೆ ಅಭಯ್‌ ಎಸ್‌ ಎಸ್‌ 99 ನೇ ರ‍್ಯಾಂಕ್‌, ಆದಿತ್ಯ ಹೊಳ್ಳ 201 ನೇ ರ‍್ಯಾಂಕ್‌, ಪ್ರಣವ್‌ ಪಿ ಸಂಜಿ 294 ನೇ ರ‍್ಯಾಂಕ್‌, ಕಾರ್ತಿಕ್‌ ಕೃಷ್ಣಮೂರ್ತಿ ಹೆಗಡೆ 492 ನೇ ರ‍್ಯಾಂಕ್‌, ಉದ್ಭವ್‌ ಎಂ ಆರ್‌ 843 ನೇ ರ‍್ಯಾಂಕ್‌, ಸಾತ್ವಿಕ್‌ ಎಸ್‌ ಶೆಟ್ಟಿ 920 ನೇ ರ‍್ಯಾಂಕ್‌ ಗಳಿಸಿದ್ದಾರೆ. ಬಿ.ಎಸ್ಸಿ ಅಗ್ರಿಕಲ್ಚರ್‌ ವಿಭಾಗದಲ್ಲಿ ಸಾತ್ವಿಕ್‌ ಎಸ್‌ ಶೆಟ್ಟಿ 237, ಉದ್ಭವ್‌ ಎಂ ಆರ್‌ 242, ಶ್ರೇಯಸ್‌ ಎಸ್‌ ಚಿಕಾಲೆ 333, ಸಾಕ್ಷಿತ್‌ ಶೆಟ್ಟಿ 457 ನೇ ರ‍್ಯಾಂಕ್‌ ಪಡೆದಿದ್ದಾರೆ.
ಪಶುವೈದ್ಯಕೀಯ ವಿಭಾಗದಲ್ಲಿ ಉದ್ಭವ್‌ ಎಂ ಆರ್‌ 298 ನೇ ರ‍್ಯಾಂಕ್‌ ಹಾಗೂ ಬಿ. ಎನ್‌ ವೈ ಎಸ್‌ ನಲ್ಲಿ 243 ನೇ ರ‍್ಯಾಂಕ್‌, ಪಶುವೈದ್ಯಕೀಯ ವಿಭಾಗದಲ್ಲಿ ಸಾತ್ವಿಕ್‌ ಎಸ್‌ ಶೆಟ್ಟಿ 407 ನೇ ರ‍್ಯಾಂಕ್‌ ಮತ್ತು ಬಿ. ಎನ್‌ ವೈ ಎಸ್‌ ನಲ್ಲಿ 531 ನೇ ರ‍್ಯಾಂಕ್‌ ಗಳಿಸಿದ್ದಾರೆ. ಎಲ್ಲಾ ವಿಭಾಗಗಳನ್ನು ಸೇರಿ 1000 ದ ಒಳಗೆ 54 ವಿದ್ಯಾರ್ಥಿಗಳು, 2000 ದ ಒಳಗೆ 112 ವಿದ್ಯಾರ್ಥಿಗಳು, 5000 ದ ಒಳಗೆ 203 ವಿದ್ಯಾರ್ಥಿಗಳು ರ‍್ಯಾಂಕ್‌ಗಳನ್ನು ಗಳಿಸುವುದರ ಮೂಲಕ ಅದ್ಭುತ ಸಾಧನೆ ಮಾಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 100 ಶೇಕಡಾ ಫಲಿತಾಂಶದೊಂದಿಗೆ ನೀಟ್‌ ಪರೀಕ್ಷೆಯಲ್ಲೂ ಉತ್ತಮ ಸಾಧನೆ ಮಾಡಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ. ವಿದ್ಯಾರ್ಥಿಗಳ ಈ ಅತ್ಯುತ್ತಮ ಸಾಧನೆಯನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಹೆತ್ತವರು, ಉಪನ್ಯಾಸಕ ವರ್ಗದವರು ಹಾಗೂ ಸಿಇಟಿ ಸಂಯೋಜಕರಾದ ಸುಜಯ್‌ ಬಿ ಟಿ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!