Friday, September 20, 2024
Friday, September 20, 2024

ಮಣಿಪಾಲ ಟೈಗರ್ ಸರ್ಕಲ್: ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಪರಿಶೀಲನೆ

ಮಣಿಪಾಲ ಟೈಗರ್ ಸರ್ಕಲ್: ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಪರಿಶೀಲನೆ

Date:

ಮಣಿಪಾಲ, ಜೂನ್ 15: ನಗರದ ಹೃದಯ ಭಾಗವಾದ ಮಣಿಪಾಲ ಟೈಗರ್ ಸರ್ಕಲ್ ಬಳಿ ನಿತ್ಯ ಸಂಚಾರ ದಟ್ಟಣೆ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ನಗರಸಭೆ ಅಧಿಕಾರಿಗಳು, ಪೊಲೀಸ್ ಉಪನಿರೀಕ್ಷಕ ಹಾಗೂ ಸ್ಥಳೀಯ ನಗರಸಭಾ ಸದಸ್ಯರೊಂದಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಖ್ಯ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್, ಅವೈಜ್ಞಾನಿಕ ರೀತಿಯಲಿ ಅಳವಡಿಸಿರುವ ಟ್ರಾಫಿಕ್ ಸಿಗ್ನಲ್, ಅಸಮರ್ಪಕ ಪ್ರಯಾಣಿಕರ ತಂಗುದಾಣ, ಫುಟ್ ಪಾತ್ ನಲ್ಲಿ ಬೀದಿ ಬದಿ ವ್ಯಾಪಾರದಿಂದ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳೆಯುತ್ತಿರುವ ಮಣಿಪಾಲ ನಗರದ ಸುಗಮ ಸಂಚಾರ, ಸ್ವಚ್ಚತೆ ಹಾಗೂ ಸಮಗ್ರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ವೈಜ್ಞಾನಿಕ ರೀತಿಯಲ್ಲಿ ಬಸ್ ನಿಲ್ದಾಣ, ಫುಟ್ ಪಾತ್, ಬೀದಿ ದೀಪ ವ್ಯವಸ್ಥೆ ಹಾಗೂ ಅಪರಾಧ ಚಟುವಟಿಕೆಗಳ ನಿಯಂತ್ರಣದ ಬಗ್ಗೆ ನಿಗಾವಹಿಸುವ ಪೊಲೀಸ್ ಇಲಾಖೆ ಹಾಗೂ ನಗರಸಭೆಯ ಮೂಲಕ ಸ್ಥಳೀಯ ರಿಕ್ಷಾ, ಟ್ಯಾಕ್ಸಿ, ಬಸ್ ಸಂಘಗಳು ಮತ್ತು ವ್ಯಾಪಾರಸ್ಥರ ಸಲಹೆ ಸೂಚನೆಗಳನ್ನು ಪಡೆದು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಹೇಳಿದರು.

ನಗರಸಭೆ ಪೌರಾಯುಕ್ತರಾದ ರಮೇಶ್ ನಾಯ್ಕ್, ಎಇಇ ಯಶವಂತ ಪ್ರಭು, ಮಣಿಪಾಲ ಪೊಲೀಸ್ ಉಪನಿರೀಕ್ಷಕ ಖಾದರ್, ನಗರಸಭಾ ಸದಸ್ಯರಾದ ಮಂಜುನಾಥ ಮಣಿಪಾಲ, ಕಲ್ಪನಾ ಸುಧಾಮ, ಸುಬ್ಬಣ್ಣ ಪೈ, ಪ್ರಶಾಂತ್ ಭಟ್ ಪೆರಂಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!