Friday, October 18, 2024
Friday, October 18, 2024

ತ್ರಿಶಾ ವಿದ್ಯಾ ಕಾಲೇಜು: ಬೈಲೂರು ರಾಮಕೃಷ್ಣ ಆಶ್ರಮಕ್ಕೆ ವಿದ್ಯಾರ್ಥಿಗಳ ಭೇಟಿ

ತ್ರಿಶಾ ವಿದ್ಯಾ ಕಾಲೇಜು: ಬೈಲೂರು ರಾಮಕೃಷ್ಣ ಆಶ್ರಮಕ್ಕೆ ವಿದ್ಯಾರ್ಥಿಗಳ ಭೇಟಿ

Date:

ಕಟಪಾಡಿ, ಜೂ. 24: ತ್ರಿಶಾ ವಿದ್ಯಾ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿಗಳಿಗೆ ಬೈಲೂರು ರಾಮಕೃಷ್ಣ ಆಶ್ರಮಕ್ಕೆ ಭೇಟಿ ಹಾಗೂ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಮನಸ್ಸು ಚಂಚಲವಾದದ್ದು ಎಲ್ಲವನ್ನೂ ಬಯಸುತ್ತದೆ. ಸುತ್ತಮುತ್ತ ಅಡೆತಡೆಗಳು ಬಹಳಷ್ಟು ಬರುತ್ತದೆ ಆದರೆ ಮನಸ್ಸು ನಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಬೇಕು. ಗುರಿ ಸ್ಪಷ್ಟವಾಗಿರಬೇಕು. ಹಾಗಿದ್ದಾಗ ಮಾತ್ರ ಅದ್ಭುತ ಸಾಧನೆ ಮಾಡಲು ಸಾಧ್ಯ ಎಂದು ರಾಮಕೃಷ್ಣ ಆಶ್ರಮದ ಸ್ವಾಮೀಜಿ ವಿನಾಯಕಾನಂದ ಜೀ ಮಹಾರಾಜ್ ಹೇಳಿದರು. ವಿದ್ಯಾರ್ಥಿಗಳಿಗೆ ಧ್ಯಾನ ಯೋಗದ ಪ್ರಾತ್ಯಕ್ಷಿಕೆ ಮಾಡಿಸಿದರು.

ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ ಭಟ್ ಅವರು, ಯಾವುದೇ ಹೊಸ ಕಾರ್ಯವನ್ನು ಪ್ರಾರಂಭಿದಲು ಇವತ್ತಿನ ದಿನವೇ ಪ್ರಶಸ್ತವಾದದ್ದು ಒಳ್ಳೆಯ ದಿನ ಯಾವುದು ಎಂದು ಕಾಯುತ್ತ ಕೂರುವುದು ಸರಿಯಲ್ಲ. ಅಷ್ಟೇ ಅಲ್ಲದೆ ಜಗತ್ತು ದಿನೇ ದಿನೇ ಬದಲಾಗುತ್ತಿದೆ. ಬದಲಾವಣೆಗಳಿಗೆ ನಮ್ಮನ್ನು ನಾವು ತೆರೆದುಕೊಳ್ಳದೆ ಹೋದರೆ ಹಿಂದೆ ಉಳಿದು ಬಿಡುತ್ತೇವೆ ಎಂದರು. ತೃತೀಯ ಬಿ.ಕಾಂ ನ ಸುಮಾರು 110 ವಿದ್ಯಾರ್ಥಿಗಳು ಭಾಗವಹಿಸಿದ್ದರು. ತ್ರಿಶಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಧೀರಜ್ ಬೆಳ್ಳಾರೆ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!