Saturday, October 19, 2024
Saturday, October 19, 2024

ತೆಂಕನಿಡಿಯೂರು: ವನಮಹೋತ್ಸವ ಸಪ್ತಾಹ ಆಚರಣೆ

ತೆಂಕನಿಡಿಯೂರು: ವನಮಹೋತ್ಸವ ಸಪ್ತಾಹ ಆಚರಣೆ

Date:

ತೆಂಕನಿಡಿಯೂರು, ಜು. 6: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಐ.ಕ್ಯೂ.ಎ.ಸಿ., ಎನ್.ಎಸ್.ಎಸ್., ಯೂತ್ ರೆಡ್‌ಕ್ರಾಸ್ ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಅರಣ್ಯ ಇಲಾಖೆ ಉಡುಪಿ ವಲಯ ಇವರ ಸಂಯುಕ್ತಾಶ್ರಯದಲ್ಲಿ ವನಮಹೋತ್ಸವ ಸಪ್ತಾಹದ ಅಂಗವಾಗಿ ಗಿಡ ನೆಡುವ ಮತ್ತು ಸಸಿ ವಿತರಣೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಉಡುಪಿ ಜಿಲ್ಲಾ ನ್ಯಾಯಾಧೀಶರಾದ ಶರ್ಮಿಳಾ ಎಸ್. ಅವರು ನಮ್ಮ ಪೂರ್ವಜರು ಸಾಕಷ್ಟು ಶ್ರಮ ವಹಿಸಿ ಬೆಳೆಸಿದ ಕಾಡನ್ನು ನಾವು ನಾಶ ಮಾಡಿದ್ದಲ್ಲದೆ ಇಂದು ಅಭಿವೃದ್ಧಿ ಹೆಸರಿನಲ್ಲಿ ಪ್ರಕೃತಿಯನ್ನು ಮತ್ತಷ್ಟು ನಾಶಪಡಿಸುತ್ತಿದ್ದೇವೆ. ಕೇವಲ ದಿನಾಚರಣೆಗಳಿಗಷ್ಟೇ ಪರಿಸರ ಜಾಗೃತಿ ಸೀಮಿತವಾಗಬಾರದು. ಪರಿಸರ ಸ್ನೇಹಿಯಾಗಿ ಬದುಕುವುದನ್ನು ನಾವು ರೂಢಿಸಿಕೊಂಡಾಗ ಮಾತ್ರ ಪರಿಸರದ ಉಳಿವು ಮತ್ತು ನಮ್ಮ ಉಳಿವು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್‌ ರೈ ಕೆ., ಮಾತನಾಡುತ್ತಾ, ಅವರು ಮುಂದಿನ ಭವಿಷ್ಯವಾಗಿರುವ ಯುವಜನತೆ ಸಕ್ರಿಯರಾದ್ದಲ್ಲಿ ಪರಿಸರ ರಕ್ಷಣೆ ಯಶಸ್ವಿಯಾಗಬಲ್ಲದು ಎಂದರು. ಅರಣ್ಯ ಇಲಾಖೆ ಉಡುಪಿಯ ವಲಯಾಧಿಕಾರಿ ಸುಬ್ರಹ್ಮಣ್ಯ ಆಚಾರ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಧಾಕೃಷ್ಣ, ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಕೆ.ಇ., ಯೂತ್ ರೆಡ್‌ಕ್ರಾಸ್ ಸಂಚಾಲಕರಾದ ಪ್ರಶಾಂತ ಎನ್ ಹಾಗೂ ಬೋಧಕ, ಬೋಧಕೇತರರು ಪಾಲ್ಗೊಂಡರು. ಎನ್.ಎಸ್.ಎಸ್. ವಿದ್ಯಾರ್ಥಿ ನಾಯಕ ವಿಘ್ನೇ಼ಶ್ ಸ್ವಾಗತಿಸಿ, ಶ್ರದ್ಧಾ ವಂದಿಸಿದರು. ಪಲ್ಲವಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!