Saturday, October 19, 2024
Saturday, October 19, 2024

ಕಾರ್ಕಳ ಕ್ರಿಯೇಟಿವ್‌ ಕಾಲೇಜು: ಕ್ರಿಯೇಟಿವ್‌ ಸಮಾಗಮ

ಕಾರ್ಕಳ ಕ್ರಿಯೇಟಿವ್‌ ಕಾಲೇಜು: ಕ್ರಿಯೇಟಿವ್‌ ಸಮಾಗಮ

Date:

ಕಾರ್ಕಳ, ಜೂ. 8: ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನ (ರಿ.) ಕಾರ್ಕಳ ಇದರ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ‘ಕ್ರಿಯೇಟಿವ್‌ ಸಮಾಗಮʼ ಕಾಲೇಜಿನ ನೇಸರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ವಾರ್ಷಿಕ ಸಂಚಿಕೆ “ಸಪ್ತಸ್ವರ”ವನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ಗಣನಾಥ ಶೆಟ್ಟಿಯವರು, ವಿದ್ಯಾರ್ಥಿಗಳು ವಿದ್ಯಾರ್ಥಿದೆಸೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಾಧನೆ ಮಾಡುವಂತಾಗಲಿ ಎಂದರು. ಸಂಸ್ಥಾಪಕರಾದ ಅಮೃತ್‌ ರೈ, ಕಾಲೇಜಿನ ವಿವಿಧ ಸಂಘಗಳನ್ನು ಉದ್ಘಾಟಿಸಿದರು. ಪ್ರಾಸ್ತಾವಿಕ ಮಾತುಗಳನ್ನಾಡಿದ ಅಶ್ವತ್‌ ಎಸ್‌.ಎಲ್‌, ಬದುಕನ್ನು ನಿರ್ಧರಿಸುವ ಪಿ.ಯು ಶಿಕ್ಷಣದಲ್ಲಿ ವಿದ್ಯಾರ್ಥಿಗಳು ಪೋಷಕರ ಭರವಸೆ ಉಳಿಸಿಕೊಳ್ಳುವಂತಹ ಸಾಧನೆ ಮಾಡುವಂತಾಗಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಮಾತನಾಡಿ, ಕ್ರಿಯಾಶೀಲ ವ್ಯಕ್ತಿತ್ವದಿಂದ ಮಾತ್ರ ಸವಾಲುಗಳನ್ನು ಎದುರಿಸಲು ಸಾಧ್ಯ. ಸಾಧನೆಗೆ ಯಾವುದೇ ಅಡ್ಡದಾರಿಗಳಿಲ್ಲ. ನೇರ ದಾರಿಯ ಪರಿಶ್ರಮವೇ ಸಾಧನೆಯ ಮೆಟ್ಟಿಲು. ಆದ್ದರಿಂದ ವಿದ್ಯಾರ್ಥಿಗಳು ಕಲಿಕೆಯ ಅವಧಿಯಲ್ಲಿ ಉದಾಸೀನ ಪ್ರವೃತ್ತಿಯವರಾಗದೆ ನಿರಂತರ ಶ್ರಮದಿಂದ ಉನ್ನತಿಗೇರುವಂತಾಗಲಿ ಎಂದರು. 2022-23 ನೇ ಸಾಲಿನ ಪ್ರಥಮ ಪಿಯುಸಿಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಿಗಳಾದ ವಿದ್ಯಾರ್ಥಿಗಳನ್ನು ಸಂಸ್ಥಾಪಕರಾದ ಆದರ್ಶ ಎಂ. ಕೆ., ಮತ್ತು ಗಣಪತಿ ಭಟ್‌ ಕೆ. ಎಸ್‌., ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಸಂಸ್ಥೆಯ ಬೋಧಕ- ಬೋಧಕೇತರರು ಉಪಸ್ಥಿತರಿದ್ದರು.

ಹಿಂದಿ ಉಪನ್ಯಾಸಕ ವಿನಾಯಕ ಜೋಗ್‌ ಸ್ವಾಗತಿಸಿ, ಜೀವಶಾಸ್ತ್ರ ಉಪನ್ಯಾಸಕ ಲೋಹಿತ್‌ ಎಸ್‌ ಕೆ ವಂದಿಸಿದರು. ವಿಜೇತಾ ಮತ್ತು ಬಳಗದವರು ಪ್ರಾರ್ಥಿಸಿದರು. ಕನ್ನಡ ಉಪನ್ಯಾಸಕ ರಾಮಕೃಷ್ಣ ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿಯರಾದ ಕೀರ್ತಿ ಪಾಟ್ಕರ್‌, ಯೋನಾ ಭಾಸ್ಕರ ಶೆಟ್ಟಿ, ನಾಗಶಿವಾನಿ, ಸಾನ್ವಿಕುಮಾರ್‌ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!