Friday, October 18, 2024
Friday, October 18, 2024

ಸಂತೆಕಟ್ಟೆ ಓವರ್ ಪಾಸ್ ಕಾಮಗಾರಿ ಪ್ರದೇಶದಲ್ಲಿ ಮಣ್ಣು ಕುಸಿತ

ಸಂತೆಕಟ್ಟೆ ಓವರ್ ಪಾಸ್ ಕಾಮಗಾರಿ ಪ್ರದೇಶದಲ್ಲಿ ಮಣ್ಣು ಕುಸಿತ

Date:

ಉಡುಪಿ, ಜು. 10: ಉಡುಪಿ ಸಂತೆಕಟ್ಟೆಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆಯುತ್ತಿರುವ ಓವರ್ ಪಾಸ್ ಕಾಮಗಾರಿ ಪ್ರದೇಶದಲ್ಲಿ ಸೋಮವಾರ ಮಣ್ಣು ಕುಸಿದ ಪರಿಣಾಮ ಸುತ್ತಮುತ್ತಲಿನ ಜನರಲ್ಲಿ ಆತಂಕ ಮನೆ ಮಾಡಿದೆ. ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಸುರಿದರೂ ರಾ.ಹೆ. ಪ್ರಾಧಿಕಾರದವರು ಎಚ್ಚೆತ್ತುಕೊಳ್ಳಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಣ್ಣು ಕುಸಿದ ಪರಿಣಾಮ ಅಲ್ಲಿ ನಿರ್ಮಿಸಿದ ತಡೆಗೋಡೆಗಳಿಗೆ ಹಾನಿಯುಂಟಾಗಿದೆ. ಘಟನಾ ಸ್ಥಳದಿಂದ ಕೂಗಳತೇ ದೂರದಲ್ಲಿರುವ ಅಂಗಡಿ ಮುಂಗಟ್ಟು ಹಾಗೂ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.

ಸಮಸ್ಯೆಗಳ ಸರಮಾಲೆ: ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾಮಗಾರಿಗೆ ಸಂಬಂಧಿಸಿದಂತೆ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಈ ಹಿಂದೆ ಮಾಧ್ಯಮಗಳಲ್ಲಿ ಹಲವು ಬಾರಿ ವಿಶೇಷ ವರದಿಗಳು ಪ್ರಕಟವಾಗಿವೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜನರ ಸುರಕ್ಷತೆಯ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಉಡುಪಿ ಜಿಲ್ಲಾಡಳಿತ ಗಡುವು ನೀಡಿದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇವುಗಳನ್ನು ಗಂಭೀರವಾಗಿ ಪರಿಗಣಿಸಿದ್ದರೆ, ಇಂತಹ ಘಟನೆ ಸಂಭವಿಸುತ್ತಿರಲಿಲ್ಲ ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!