Saturday, October 19, 2024
Saturday, October 19, 2024

ಡೆಂಗ್ಯೂ ಜ್ವರ ಮತ್ತು ಚಿಕುಂಗುನ್ಯ ತಡೆಗಟ್ಟಲು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು

ಡೆಂಗ್ಯೂ ಜ್ವರ ಮತ್ತು ಚಿಕುಂಗುನ್ಯ ತಡೆಗಟ್ಟಲು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು

Date:

ಉಡುಪಿ, ಸೆ. 20: ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವುದರಿಂದ ಡೆಂಗ್ಯೂ ಜ್ವರವು ಒಬ್ಬರಿಂದ ಮತ್ತೊಬ್ಬರಿಗೆ ಹರಡಲಿದ್ದು, ಈಡಿಸ್ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತದೆ. ಸೊಳ್ಳೆ ಕಚ್ಚಿದ 5-7 ದಿನಗಳಲ್ಲಿ ಇದ್ದಕ್ಕಿದಂತೆ ವಿಪರೀತ ಜ್ವರ, ಕಣ್ಣಿನ ಗುಡ್ಡೆಗಳ ಹಿಂಭಾಗದಲ್ಲಿ ನೋವು, ತೀವ್ರ ತಲೆನೋವು, ಮೈಕೈ & ಕೀಲು ನೋವು, ವಾಕರಿಕೆ/ ವಾಂತಿ, ಇವುಗಳ ಜೊತೆಗೆ ತೀವ್ರ ಹೊಟ್ಟೆ ನೋವು, ಬಾಯಿ, ಮೂಗು ಹಾಗೂ ವಸಡುಗಳಲ್ಲಿ ರಕ್ತಸಾವದ ಗುರುತುಗಳು, ಚರ್ಮದ ಮೇಲೆ ಅಲ್ಲಲ್ಲಿ ಕೆಂಪಾದ ಗಂಧೆಗಳು / ರಕ್ತಸ್ರಾವದ ಗುರುತುಗಳು, ಕಪ್ಪು ಬಣ್ಣದ ಮಲ ವಿಸರ್ಜನೆ, ವಿಪರೀತ ಬಾಯಾರಿಕೆ, ತಣ್ಣನೆಯ ಬಿಳಿಚಿದ ಚರ್ಮ, ಜ್ಞಾನ ತಪ್ಪುವುದು, ರಕ್ತದ ಒತ್ತಡದ ಕುಸಿತ & ನಾಡಿ ಬಡಿತದ ಕುಸಿತ ದಂತಹ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಡೆಂಗ್ಯೂ ಜ್ವರಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಆದರೆ, ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆಯನ್ನು ಪಡೆಯದಿದ್ದಲ್ಲಿ ರೋಗ ಲಕ್ಷಣಗಳು ಉಲ್ಬಣಗೊಂಡು, ಡೆಂಗಿ ರಕ್ತ ಸ್ರಾವ ಜ್ವರ ಹಾಗೂ ಡೆಂಗಿ ಆಘಾತ ಜ್ವರದಿಂದ ಸಾವು ಸಂಭವಿಸಬಹುದು. ಆದ್ದರಿಂದ ಡೆಂಗ್ಯೂ ಜ್ವರದ ರೋಗ ಲಕ್ಷಣಗಳು ಕಂಡುಬಂದ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು. ಸೋಂಕಿತ ಈಡಿಸ್ ಜಾತಿಯ ಸೊಳ್ಳೆಗಳು ಕಚ್ಚುವುದರಿಂದ ಚಿಕುಂಗುನ್ಯ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಆದರೆ ಚಿಕನ್‌ಗುನ್ಯ ಮಾರಣಾಂತಿಕ ರೋಗವಲ್ಲ. ಇದ್ದಕ್ಕಿದ್ದಂತೆ ಜ್ವರ, ಕೀಲುಗಳಲ್ಲಿ ತೀವ್ರವಾದ ನೋವು ಮತ್ತು ಊತ ಕಾಣಿಸಿಕೊಳ್ಳುವುದು ಈ ರೋಗದ ಲಕ್ಷಣಗಳಾಗಿದ್ದು, ಚಿಕುಂಗುನ್ಯ ಸೋಂಕಿಗೆ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಆದರೆ, ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಆದ್ದರಿಂದ, ಯಾವುದೇ ಜ್ವರವಿರಲಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ರಕ್ತಪರೀಕ್ಷೆ ಹಾಗೂ ಚಿಕಿತ್ಸೆಯನ್ನು ನೀಡಲಾಗುವುದು.

ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಸೊಳ್ಳೆಗಳು ಮನೆಗಳಲ್ಲಿನ ನೀರು ಶೇಖರಣಾ ಸಂಗ್ರಾಹಕಗಳಾದ, ಸಿಮೆಂಟ್ ತೊಟ್ಟಿಗಳು, ಬ್ಯಾರೆಲ್, ಡ್ರಂ, ಹೂ ಕುಂಡಗಳ ಕೆಳಗಿನ ತಟ್ಟೆಗಳು, ಏರ್-ಕೂಲರ್, ರೆಫ್ರಿಜರೇಟರ್‌ನ ಡಿ ಫ್ರಾಸ್ಟ್ ಟ್ರೇ ಗಳಲ್ಲಿ ಹಾಗೂ ಮನೆಯ ಸುತ್ತ-ಮುತ್ತಲಿನ ಪರಿಸರದಲ್ಲಿ ಬಿಸಾಡಿದ ಒಡೆದ ಬಾಟಲಿ, ಟೈರು, ಪ್ಲಾಸ್ಟಿಕ್ ಗ್ಲಾಸ್, ಎಳೆನೀರಿನ ಚಿಪ್ಪು ಹಾಗೂ ಇತರ ಘನತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾದ ಮಳೆಯ ನೀರಿನಲ್ಲಿ ಈಡಿಸ್ ಸೊಳ್ಳೆಗಳು ಹೇರಳವಾಗಿ ಉತ್ಪತ್ತಿಯಾಗುತ್ತವೆ. ಮನೆಯಲ್ಲಿರುವ ಎಲ್ಲಾ ನೀರಿನ ಸಂಗ್ರಾಹಕಗಳು ಮತ್ತು ಮೇಲ್ಛಾವಣಿಯಲ್ಲಿರುವ ತೊಟ್ಟಿಯ ನೀರನ್ನು ಕನಿಷ್ಠ ವಾರಕ್ಕೊಮ್ಮೆ ಖಾಲಿ ಮಾಡಿ, ಉಜ್ಜಿ ತೊಳೆದು, ಒಣಗಿಸಿ ನೀರನ್ನು ಮತ್ತೆ ತುಂಬಿಸಿ ಭದ್ರವಾಗಿ ಮುಚ್ಚಳಿಕೆಯಿಂದ ಮುಚ್ಚಬೇಕು. ಮನೆಯ ಸುತ್ತ-ಮುತ್ತಲಿನ ಪರಿಸರದಲ್ಲಿನ ಒಡೆದ ಬಾಟಲಿ, ಟಿನ್, ಟೈರು ಇತ್ಯಾದಿ ಘನತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು. ಘನತ್ಯಾಜ್ಯ ವಸ್ತುಗಳನ್ನು ಬೋರಲಾಗಿಡುವುದು ಮತ್ತು ಶೀಘ್ರವಾಗಿ ಸೂಕ್ತ ವಿಲೇವಾರಿ ಮಾಡಬೇಕು. ಏರ್ ಕೂಲರ್‌ಗಳಲ್ಲಿ ನೀರನ್ನು ಕನಿಷ್ಠ ವಾರಕ್ಕೊಮ್ಮೆ ಬದಲಾಯಿಸಬೇಕು. ಯಾವಾಗಲೂ ಮೈ ತುಂಬಾ ಬಟ್ಟೆ ಧರಿಸಬೇಕು. ಹಗಲು ಹೊತ್ತಿನಲ್ಲಿ ನಿದ್ರಿಸುವ / ವಿಶ್ರಾಂತಿ ಪಡೆಯುವ ಗರ್ಭಿಣಿಯರು, ಮಕ್ಕಳು ಮತ್ತು ವಯಸ್ಸಾದವರು ತಪ್ಪದೆ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು.

ಡೆಂಗ್ಯೂ ಜ್ವರ ಪೀಡಿತರೂ ಸಹ ತಪ್ಪದೆ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ಜ್ವರ ಪೀಡಿತರು ಸಾಕಷ್ಟು ದ್ರವರೂಪದ ಆಹಾರಗಳನ್ನು ಸೇವಿಸುವುದರೊಂದಿಗೆ ಅಗತ್ಯ ವಿಶ್ರಾಂತಿಯನ್ನು ಪಡೆಯಬೇಕು. ಮನೆಯ ಕಿಟಕಿ, ಬಾಗಿಲುಗಳಿಗೆ ಸೊಳ್ಳೆ ನಿರೋಧಕ ಜಾಲರಿಗಳನ್ನು ಅಳವಡಿಸಬೇಕು ಜೊತೆಗೆ ಈಡಿಸ್ ಲಾರ್ವಾ ಸಮೀಕ್ಷೆ ಹಾಗೂ ಉತ್ಪತ್ತಿತಾಣ ಸಮೀಕ್ಷೆಗೆಂದು ಮನೆ ಭೇಟಿ ನೀಡುವ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಸ್ವಯಂಸೇವಕರು ನೀಡುವ ಸಲಹೆ – ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ಶಾಲಾ ಕಾಲೇಜು, ಅಂಗನವಾಡಿ, ಸರ್ಕಾರಿ / ಖಾಸಗಿ ಕಚೇರಿಗಳು, ಬಸ್ ಡಿಪೋ ಇತ್ಯಾದಿಗಳಲ್ಲಿಯೂ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ಅಗತ್ಯವಾಗಿ ನಿರ್ಮೂಲನೆ ಮಾಡಬೇಕು. ಡೆಂಗ್ಯೂ ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಸ್ವಯಂ ವೈದ್ಯ ಪದ್ಧತಿಯನ್ನು ಪಾಲಿಸದೇ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು. ಡೆಂಗ್ಯೂ ಜ್ವರದ ಲಕ್ಷಣಗಳಿದ್ದಲ್ಲಿ ಬ್ರೂಫಿನ್ ಅಥವಾ ಇತರ ನೋವು ನಿವಾರಕಗಳನ್ನು ಸೇವಿಸಬಾರದು. ಇದರಿಂದ ರಕ್ತಸ್ರಾವವಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಡೆಂಗ್ಯೂ ಜ್ವರ ಹಾಗೂ ಚಿಕುಂಗುನ್ಯ ರೋಗಗಳಿಗೆ ಭಯ ಪಡದೇ, ರೋಗಗಳ ಕುರಿತು ಎಚ್ಚರಿಕೆ ವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಆರೋಗ್ಯ ಕೇಂದ್ರ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!