Saturday, October 19, 2024
Saturday, October 19, 2024

ಉಪ್ಪೂರು: ಆತ್ಮಹತ್ಯೆಗೆ ಯತ್ನಿಸಿದಾತನ ರಕ್ಷಣೆ

ಉಪ್ಪೂರು: ಆತ್ಮಹತ್ಯೆಗೆ ಯತ್ನಿಸಿದಾತನ ರಕ್ಷಣೆ

Date:

ಉಡುಪಿ, ಸೆ.21: ಉಪ್ಪೂರು ಕುದ್ರುಬೆಟ್ಟುವಿನಲ್ಲಿ ಹರಿಯುವ ಸುವರ್ಣ ನದಿಯಲ್ಲಿ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ ಹೊರ ರಾಜ್ಯದ ಯುವಕನನ್ನು ಸ್ಥಳೀಯರು ಹಾಗೂ ಸಮಾಜಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ. ರಕ್ಷಿಸಲ್ಪಟ್ಟ ಯುವಕ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಸುಮನ್ (40) ಎನ್ನಲಾಗಿದೆ. ಯುವಕನ ಸಂಬಂಧಿಕರು ಇದ್ದಲ್ಲಿ ಕಾರ್ಕಳದ ಹೊಸಬೆಳಕು ಆಶ್ರಮವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಲೋಕೇಶ್ ಮೆಂಡನ್, ಸುಜಿ ಮೆಂಡನ್, ಅರವಿಂದ ಮೆಂಡನ್, ಉಮೇಶ ಜತ್ತನ್ನ, ಪ್ರದೀಪ ಮೆಂಡನ್, ಸುರೇಶ್ ಬಿ. ಆರ್ ಭಾಗಿಯಾಗಿದ್ದರು. ಯುವಕ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಕೃತ್ಯ ನಡೆಸಲು ಮುಂದಾಗಿರುವುದು ಕಂಡುಬಂದಿದೆ. ರಕ್ಷಿಸಲ್ಪಟ್ಟ ಯುವಕನ ಮನವೊಲಿಸಿದ ಸಮಾಜಸೇವಕ ಒಳಕಾಡು ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ಆಶ್ರಯ ಒದಗಿಸಿದ್ದಾರೆ. ಆಶ್ರಮದ ಸಂಚಾಲಕರಾದ ವಿನಯಚಂದ್ರ ಸಾಸ್ತಾನ, ತನುಲಾ ತರುಣ್, ಗೌರೀಶ್ ಅವರು ಅಸಹಾಯಕ ಯುವಕನಿಗೆ ಆಶ್ರಯ ನೀಡಲು ನೆರವಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!