Saturday, October 19, 2024
Saturday, October 19, 2024

ಎನ್‌.ಎಸ್‌.ಎಸ್ ಘಟಕ ಉದ್ಘಾಟನೆ

ಎನ್‌.ಎಸ್‌.ಎಸ್ ಘಟಕ ಉದ್ಘಾಟನೆ

Date:

ಮೂಡಬಿದಿರೆ, ಸೆ. 23: ಮಕ್ಕಳೆಂದರೆ ಪ್ರಶ್ನೆ, ಆಸಕ್ತಿ, ಕ್ರಿಯಾಶೀಲತೆ, ಚಟುವಟಿಕೆಯ ದ್ಯೋತಕ. ಆದುದರಿಂದ ವಿದ್ಯಾರ್ಥಿಗಳು ಯಾವಾಗಲೂ ಮಗುವಿನ ಮನಸ್ಥಿತಿಯನ್ನು ಉಳಿಸಿಕೊಳ್ಳಬೇಕು. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಮಾಡುವ ಎಲ್ಲಾ ಚಟುವಟಿಕೆಗಳು ರಾಷ್ಟ್ರೀಯತೆಯಿಂದ ಕೂಡಿರಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಕೇಳಿದರು. ಆಳ್ವಾಸ್ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳ 2023-24ರ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸೇವೆಯು ಶಾಶ್ವತವಾಗಿ ಸಂತೋಷ ನೀಡುತ್ತದೆ. ಆದುದರಿಂದ ವಿದ್ಯಾರ್ಥಿಗಳು ಕ್ಷಣಿಕ ಸಂತೋಷಕ್ಕೆ ಯತ್ನಿಸದೇ ಸೇವೆಯ ಮೂಲಕ ಶಾಶ್ವತ ಸಂತೋಷಕ್ಕೆ ಪ್ರಯತ್ನಿಸಬೇಕೆಂದು ಕರೆ ನೀಡಿದರು.

ಪ್ರಾಂಶುಪಾಲ ಡಾ. ಕುರಿಯನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಎನ್‌ಎಸ್‌ಎಸ್ ಸಂಯೋಜನಾಧಿಕಾರಿಗಳಾದ ವಸಂತ್, ಅಕ್ಷತಾ ಪ್ರಭು, ಶ್ರೇಯಸ್ವಿ, ಅಪರ್ಣ ಹಾಗೂ ವಿದ್ಯಾರ್ಥಿ ಕಾರ್ಯದರ್ಶಿ ಆದಿತ್ಯ ನಾಯಕ್, ಸಹ ಕಾರ‍್ಯದರ್ಶಿ ಸಮೀಕ್ಷಾ, ಯುನಿಟ್ ಲೀಡರ್‌ಗಳಾದ ಆದಿಶ್, ದಿಶಾ, ಸೂರಜ್, ವರ್ಷಿತಾ, ಅನನ್ಯಾ, ಸೃಜನ್, ಸನ್ವಿತ್ ಉಪಸ್ಥಿತರಿದ್ದರು. ಶಶಾಂಕ್ ಪರಿಚಯ ಭಾಷಣ ಮಾಡಿದರು. ಸ್ವೀಕೃತ್ ಸ್ವಾಗತಿಸಿ, ಧೀರಜ್ ವಂದಿಸಿ, ಆದರ್ಶ್ ಕಾರ್ಯಕ್ರಮ ನಿರೂಪಿಸಿದರು. ಸನ್ವಿತ್ ಅತಿಥಿಗಳನ್ನು ಪರಿಚಯಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೈಸೂರು ವಿಭಾಗ ಮಟ್ಟದ ಕಬಡ್ಡಿ: ಸಾಯ್ಬ್ರಕಟ್ಟೆ ಶಾಲೆ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ಅ.19: 14 ವಯೋಮಾನದ ಬಾಲಕರ ಕಬಡ್ಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ...

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...
error: Content is protected !!