Friday, October 18, 2024
Friday, October 18, 2024

ಗಂಗೊಳ್ಳಿ ಶಾರದೋತ್ಸವದಲ್ಲಿ ಗಮನ ಸೆಳೆದ ಸಂಜಿತ್ ಎಮ್ ದೇವಾಡಿಗ ಸ್ಯಾಕ್ಸೋಫೋನ್ ವಾದನ

ಗಂಗೊಳ್ಳಿ ಶಾರದೋತ್ಸವದಲ್ಲಿ ಗಮನ ಸೆಳೆದ ಸಂಜಿತ್ ಎಮ್ ದೇವಾಡಿಗ ಸ್ಯಾಕ್ಸೋಫೋನ್ ವಾದನ

Date:

ಗಂಗೊಳ್ಳಿ, ಅ.25: ಸೇವಾ ಸಂಘ(ರಿ.) ಗಂಗೊಳ್ಳಿಯ 49 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ವೇದಿಕೆಯಲ್ಲಿ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಹುಮುಖ ಬಾಲ ಪ್ರತಿಭೆ ಸಂಜಿತ್ ಎಮ್ ದೇವಾಡಿಗ ತಮ್ಮ ತಂಡದೊಂದಿಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ಸಲ್ಲಿಸಿದರು. ‘ಶಾರದೆ ದಯೆ ತೋರಿದೆ’, ‘ಡೀ ಡೀ ಆಡ್ಯಾನೇ ರಂಗ’, ‘ಆವ ಕುಲವೋ ರಂಗ’, ‘ಕಣ್ಣುಗಳೆರಡು ಸಾಲದಮ್ಮ’, ‘ಕಮಲದ ಮೊಗದೋಳೆ’, ‘ತುಳುವನಾಡ ಧರ್ಮ ತುಡರ್’, ‘ಎಂಥ ಅಂದ ಎಂಥ ಚಂದ’, ‘ತಂಬೂರಿ ಮೀಟಿದವ’ ಮೊದಲಾದ ಗೀತೆಗಳನ್ನು ಸಾಕ್ಸೋಫೋನ್ ವಾದನದ ಮೂಲಕ ಸುಂದರವಾಗಿ ಪ್ರಸ್ತುತಪಡಿಸಿ ಜನಮನವನ್ನು ಸೆಳೆದರು.

ತವಿಲ್ ನಲ್ಲಿ ಹರ್ಷವರ್ಧನ ಖಾರ್ವಿ, ತಬಲಾದಲ್ಲಿ ಎಸ್ ರಾಮಕೃಷ್ಣ ಶೆಣೈ ಹಾಗೂ ತಾಳದಲ್ಲಿ ಮಾಧವ ದೇವಾಡಿಗ ಸಹಕರಿಸಿದರು. ಪ್ರಧಾನ ಪುರೋಹಿತರಾದ ಜಿ. ರಾಘವೇಂದ್ರ ನಾರಾಯಣ ಆಚಾರ್ಯ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯದ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು. ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷ ಗೋಪಾಲ ಖಾರ್ವಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!