Friday, October 18, 2024
Friday, October 18, 2024

ಪೊಳಲಿ: 8-9 ನೇ ಶತಮಾನದ ಅಪೂರ್ವ ನರಸಿಂಹ ವಿಗ್ರಹ

ಪೊಳಲಿ: 8-9 ನೇ ಶತಮಾನದ ಅಪೂರ್ವ ನರಸಿಂಹ ವಿಗ್ರಹ

Date:

ಉಡುಪಿ, ಅ.27: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಸಮೀಪದ ಕಲ್ಕುಟದ ಭರತ್ ದೋಟ ಇವರ ಜಾಗದಲ್ಲಿ ‘ಬಾಕುಲಜ್ಜ’ ಎಂದು ಸ್ಥಳೀಯರಿಂದ ಕರೆಯಲ್ಪಡುವ ನರಸಿಂಹ ವಿಗ್ರಹವಿದ್ದು, ಇದನ್ನು ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಉಪನ್ಯಾಸಕರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಮತ್ತು ಇಲ್ಲಿನ ತೃತೀಯ ಬಿ.ಎ ವಿದ್ಯಾರ್ಥಿ ವಿಶಾಲ್ ರೈ ಕೆ ಇವರು ಅಧ್ಯಯನಕ್ಕೆ ಒಳಪಡಿಸಿರುತ್ತಾರೆ. ಸ್ಥಳೀಯರು ತಮ್ಮ ದನ – ಕರುಗಳು ಅಸ್ವಸ್ಥ ಅಥವಾ ಕಾಣೆಯಾದ ಸಂದರ್ಭದಲ್ಲಿ ಈ ಬಾಕುಲಜ್ಜನಿಗೆ (ನರಸಿಂಹ) ಹರಕೆಯನ್ನು ಸಲ್ಲಿಸಿ, ಇಂದಿಗೂ ಪೂಜಿಸಿ ಮತ್ತು ರಕ್ಷಿಸಿಕೊಂಡು ಬಂದಿರುವುದು ಶ್ಲಾಘನೀಯ ಕಾರ್ಯ ಎಂದು ಸಂಶೋಧನಾರ್ಥಿಗಳು‌ ತಿಳಿಸಿದ್ದಾರೆ.

ಈ ವಿಗ್ರಹದ ಪೀಠ ಭಾಗವು ಭೂಮಿಯಲ್ಲಿ‌ ಹುದುಗಿದ್ದು, ಭೂ ಮೇಲ್ಮೈಯಿಂದ ಸುಮಾರು 2.5 ಅಡಿ ಎತ್ತರವಿರುವ ಈ ವಿಗ್ರಹವನ್ನು ಕುಳಿತಿರುವಂತೆ ಕೆತ್ತನೆ ಮಾಡಲಾಗಿದೆ. ಸಿಂಹದ ಮುಖ ಮತ್ತು ಮನುಷ್ಯ ದೇಹ ರಚನೆಯನ್ನು ಹೊಂದಿರುವ ದ್ವಿಭುಜಧಾರಿಯಾಗಿರುವ ಈ ನರಸಿಂಹ ಶಿಲ್ಪವು ತನ್ನ ಎಡಗೈಯನ್ನು ಎಡತೊಡೆಯ ಮೇಲೆ ಹಾಗೂ ತನ್ನ ಬಲಗೈಯಲ್ಲಿ ಬಹುಬೀಜಫಲವನ್ನು ಹಿಡಿದು ಬಲಗಾಲಿನ ಮೊಣಗಂಟಿನ ಮೇಲೆ ಇರಿಸಿ ಕುಳಿತ ಭಂಗಿಯಲ್ಲಿದೆ. ಶಿಲ್ಪದಲ್ಲಿ ಕಂಠಪಟ್ಟಿ, ತೋಳ್ಭಂದಿ, ಕೈಗಡಗದ ವಿನ್ಯಾಸವನ್ನು ಕಾಣಬಹುದಾಗಿದೆ.

ಇದೇ‌ ಮಾದರಿಯ ಇನ್ನೊಂದು‌ ಮೂರ್ತಿಯು ಪೊಳಲಿ ರಾಜರಾಜೇಶ್ವರಿ ದೇವಾಲಯದ ಹತ್ತಿರವಿರುವ ಕೊಟ್ಟಾರಿಪಾಲು ಪ್ರದೇಶದ ನಾರಾಯಣ ಭಟ್ ಇವರ ಜಾಗದಲ್ಲಿದ್ದು, ಇದರ ಕಾಲಮಾನವನ್ನು ಪಾದೂರು‌ ಗುರುರಾಜ ಭಟ್ಟರು ತಮ್ಮ ಸಂಶೋಧನಾ ಗ್ರಂಥವಾದ ‘ಸ್ಟಡೀಸ್ ಇನ್ ತುಳುವ ಹಿಸ್ಟರಿ ಆ‌ಂಡ್ ಕಲ್ಚರ್’ ಲ್ಲಿ 8-9 ನೇ ಶತಮಾನದ್ದೆಂದು ಹೇಳಿರುತ್ತಾರೆ. ಹಾಗಾಗಿ ಇದೇ ರೀತಿಯ ಹೋಲಿಕೆಯನ್ನು ಹೊಂದಿರುವ ಈ ಶಿಲ್ಪವು ಸಹ ಕಾಲಮಾನದ ದೃಷ್ಟಿಯಿಂದ ಸುಮಾರು 8-9 ನೇ ಶತಮಾನಕ್ಕೆ ಸೇರಿರಬಹುದೆಂದು ಅಂದಾಜಿಸಿಲಾಗಿದೆ. ಕ್ಷೇತ್ರಕಾರ್ಯ ಶೋಧನೆಯಲ್ಲಿ ವಿಜಿತಾ ಅಮೀನ್, ರೋಹಿತಾಕ್ಷ, ಸೂರಜ್ ಪೊಳಲಿ ಮತ್ತು ಕೃಷ್ಣ ಪೊಳಲಿಯವರು ಸಹಕಾರ ನೀಡಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!