Saturday, October 19, 2024
Saturday, October 19, 2024

ಡಾ. ಯಂಡಮೂರಿ ವೀರೇಂದ್ರನಾಥ್‍ ಸಂವಾದ

ಡಾ. ಯಂಡಮೂರಿ ವೀರೇಂದ್ರನಾಥ್‍ ಸಂವಾದ

Date:

ಉಡುಪಿ, ಅ.30: ಕುಂದಾಪುರ ಎಜ್ಯುಕೇಶನ್‍ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್‍. ಎಮ್‍. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗಾಗಿ ಒಂದು ದಿನದ ಜ್ಞಾನವಿಕಾಸ ಕಾರ್ಯಾಗಾರ ನಡೆಯಿತು. ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ ಕಾರ್ಯಾಗಾರವನ್ನು ಉದ್ಘಾಟಿಸಿದರು. ವಿಜಯಕ್ಕೆ ಐದು ಮೆಟ್ಟಿಲು ಖ್ಯಾತಿಯ ಹಿರಿಯ ಕಾದಂಬರಿಕಾರ ಡಾ. ಯಂಡಮೂರಿ ವೀರೇಂದ್ರನಾಥ್‍, ಅಂದದ ಕೈಬರಹದ ತರಬೇತುದಾರರೂ, ವಾಗ್ಮಿಯೂ ಆದ ವೈ. ಮಲ್ಲಿಕಾರ್ಜುನ ರಾವ್‍ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

ಮೊದಲ ಅವಧಿಯಲ್ಲಿ ಡಾ. ಯಂಡಮೂರಿ ವೀರೇಂದ್ರನಾಥ್‍ರವರು ಮಾತನಾಡಿ, ನಮ್ಮ ಯಶಸ್ಸಿಗೆ ನಾವೇ ನಮ್ಮನ್ನು ಪರಿಪೂರ್ಣವಾಗಿ ತೊಡಗಿಸಿಕೊಂಡು ಕಾರ್ಯಸಾಧನೆಯ ಮೂಲಕ ಯಶಸ್ಸಿನ ಮೆಟ್ಟಿಲೇರಬೇಕು. ಇದಕ್ಕೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಅತೀ ಮುಖ್ಯ ಎನ್ನುವದನ್ನು ತಿಳಿಸುತ್ತಾ ತಮ್ಮ ಸಾಧನೆಯ ಬದುಕಿನ ಪುಟಗಳನ್ನು ತೆರೆದಿಟ್ಟರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್‍ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿನಿ ಸ್ಪಂದನಾ ಪಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!