Saturday, September 21, 2024
Saturday, September 21, 2024

ಮಕ್ಕಳ ಕನಸುಗಳಿಗೆ ಬಣ್ಣ ತುಂಬುವ ಕೆಲಸವಾಗಬೇಕು: ಬಿ ಆರ್ ಲಕ್ಷ್ಮಣ ರಾವ್

ಮಕ್ಕಳ ಕನಸುಗಳಿಗೆ ಬಣ್ಣ ತುಂಬುವ ಕೆಲಸವಾಗಬೇಕು: ಬಿ ಆರ್ ಲಕ್ಷ್ಮಣ ರಾವ್

Date:

ಕೋಟ, ನ.27: ಇಂದಿನ ಮಕ್ಕಳು ಮುಂದಿನ ಭವ್ಯ ಭಾರತದ ಅಡಿಪಾಯಗಳು. ಅವರಲ್ಲಿನ ಸೂಪ್ತ ಪ್ರತಿಭೆಗಳನ್ನು ಗುರುತಿಸುವ ವೇದಿಕೆ ಕಲ್ಪಿಸಬೇಕಾದ ಅನಿವಾರ್ಯತೆಯಿದೆ. ಈ ನಿಟ್ಟಿನಲ್ಲಿ ಮಕ್ಕಳನ್ನು ಕೇಂದ್ರೀಕರಿಸಿಕೊಂಡು ಥೀಮ್ ಪಾರ್ಕ್ನಲ್ಲಿ ಹಲವಾರು ತರಬೇತಿಗಳನ್ನು ನೀಡುತ್ತಿರುವುದು ಶ್ಲಾಘನೀಯ, ಕಾರಂತರು ಎನ್ನುವುದೇ ಒಂದು ವಿಸ್ಮಯಲೋಕ. ಅವರ ಬದುಕಿನ ಚಿತ್ರಣಗಳು, ಸಾಹಿತ್ಯದ ಮೂಲಕ ಸಮಾಜವನ್ನು ತಿದ್ದುವ ಕಾರ್ಯ ಪ್ರಸ್ತುತ ಕಾಲಘಟ್ಟಕ್ಕೂ ಮಾದರಿಯಾಗಿದೆ ಎಂದು ಕನ್ನಡದ ಹೆಸರಾಂತ ಹಿರಿಯ ಸಾಹಿತಿ ಬಿ ಆರ್ ಲಕ್ಷಣ್‌ರಾವ್ ಹೇಳಿದರು. ಅವರು ಡಾ. ಶಿವರಾಮ ಕಾರಂತ ಪ್ರತಿಷ್ಠಾನ(ರಿ)ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ)ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಅಮೋಘ(ರಿ) ಹಿರಿಯಡ್ಕ ಸಹಯೋಗದಲ್ಲಿ ನಡೆದ ತಿಂಗಳ ಸಡಗರ-ಕಾರಂತ ಬಾಲಪುರಸ್ಕಾರ-ಸಂವಾದ-ಬಾಲ ಯಕ್ಷಗಾನ ವೈಭವ ಅನನ್ಯ- 2023 (ಪ್ರತಿಭೆಗಳ ಹೆಜ್ಜೆನಾದ) ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಮೂರನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರವನ್ನು ಎಫ್. ಎಸ್. ಕೆ ಇಂಗ್ಲಿಷ್ ಮಿಡಿಯಂ ಸ್ಕೂಲ್ ಪೆರ್ಡೂರು ವಿದ್ಯಾರ್ಥಿನಿ ಸಾನಿಧ್ಯ ಆಚಾರ್ಯ, ಸೈಂಟ್ ಮೆರೀಸ್ ಆಂಗ್ಲಮಾಧ್ಯಮ ಶಾಲೆ ಕನ್ನರ್ಪಾಡಿ ವಿದ್ಯಾರ್ಥಿ ಅನ್ವಿತ್ ಆರ್. ಶೆಟ್ಟಿಗಾರ್, ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಬ್ರಹ್ಮಾವರ ವಿದ್ಯಾರ್ಥಿ ನಿಧೀಶ್, ಜಿ.ಪ.ಸ.ಹಿ.ಪ್ರಾ.ಶಾಲೆ ಕಲಂಬಾಡಿಪದವು ವಿದ್ಯಾರ್ಥಿನಿ ಮನಸ್ವೀ ಕುಲಾಲ್, ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ ವಿದ್ಯಾರ್ಥಿ ವಿಶ್ರುತ್ ಸಾಮಗ, ರೋಟರಿ ಕೇಂದ್ರೀಯ ಶಾಲೆ ಮೂಡುಬಿದಿರೆ ವಿದ್ಯಾರ್ಥಿನಿ ಆಶ್ನಾಲೆನಾ ಪಿರೇರಾ, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರು ವಿದ್ಯಾರ್ಥಿ ಅಕ್ಷರ ಪಟವಾಲ್, ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಬ್ರಹ್ಮಾವರ ವಿದ್ಯಾರ್ಥಿ ನಿಹಾರ್ ಜೆ.ಎಸ್, ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಬ್ರಹ್ಮಾವರದ ವಿದ್ಯಾರ್ಥಿ ಆದಿತ್ಯ ಆರ್, ಸರಸ್ವತಿ ವಿದ್ಯಾಲಯ ಸಿದ್ದಾಪುರ ವಿದ್ಯಾರ್ಥಿನಿ ವಿಧಾತ್ರಿ, ಎಸ್.ಆರ್, ಎಸ್. ಆರ್. ಪಬ್ಲಿಕ್ ಸ್ಕೂಲ್ ಹೆಬ್ರಿ ವಿದ್ಯಾರ್ಥಿ ವಿನೀಶ್ ಆಚಾರ್ಯ, ಎಚ್. ಎಂ.ಎಂ.ಇಂಗ್ಲಿಷ್ ಪ್ರೀಸ್ಕೂಲ್ ಕುಂದಾಪುರ ವಿದ್ಯಾರ್ಥಿ ಆರ್ಯನ್ ಕೆ. ಪೂಜಾರಿ, ಪೋದಾರ್ ಇಂಟರ್‌ನ್ಯಾಶನಲ್ ಸ್ಕೂಲ್ ಹಾಸನ ವಿದ್ಯಾರ್ಥಿನಿ ಲಾಲಿತ್ಯ ಕುಮಾರ್, ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಬ್ರಹ್ಮಾವರ ವಿದ್ಯಾರ್ಥಿನಿ ಅನುಷ್ಕಾ ಎನ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳ್ಳಾಡಿ- ಹರ್ಕಾಡಿ ವಿದ್ಯಾರ್ಥಿನಿ ಶರಧಿ ಎಸ್, ಕ್ರೆಸ್ಟ್ ಕಿಂಗ್ ಇಂಗ್ಲಿಷ್ ಮೀಡಿಯಂ ಹೈಯರ್ ಪ್ರೈಮರಿ ಸ್ಕೂಲ್ ಕಾರ್ಕಳ ವಿದ್ಯಾರ್ಥಿನಿ ಅಪೂರ್ವ ನಾಯ್ಕ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಯ್ಬ್ರಕಟ್ಟೆ ವಿದ್ಯಾರ್ಥಿನಿ ಪ್ರಣೀತಾ, ಶ್ರೀ ದು.ಪ.ಅ.ಹಿ.ಪ್ರಾ.ಶಾಲೆ ಮಂದಾರ್ತಿ ವಿದ್ಯಾರ್ಥಿನಿ ಕೃತಿಕಾ, ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ. ಶಾಲೆ ಖಾರ್ವಿಕೇರಿ ಗಂಗೊಳ್ಳಿ ವಿದ್ಯಾರ್ಥಿನಿ ಆರಾಧ್ಯ ಆರ್, ವಿಶ್ವವಿನಾಯಕ ನ್ಯಾಶನಲ್ ಇಂಗ್ಲಿಷ್ ಮಿಡಿಯಂ ಸ್ಕೂಲ್ ತೆಕ್ಕಟ್ಟೆ ವಿದ್ಯಾರ್ಥಿ ಯಕ್ಷತ್ ಶೆಟ್ಟಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಡ್ಡರ್ಸೆ ವಿದ್ಯಾರ್ಥಿನಿ ರಿಯಾ ಶೆಟ್ಟಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಂ.ಎ.ಆರ್.ಪಿ ತುಮಕೂರು ವಿದ್ಯಾರ್ಥಿ ಆರ್ಯ ಆರ್ ಭಟ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರವಡಿ ವಿದ್ಯಾರ್ಥಿ ಪ್ರಣವ್, ಕುವೆಂಪು ಶತಮಾನೋತ್ಸವ ಮಾದರಿ ಹಿರಿಯ ಪ್ರಾಥಮಿಕ ಶಾಲೆ ತೆಕ್ಕಟ್ಟೆ ವಿದ್ಯಾರ್ಥಿನಿ ಪರಿಣಿತ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ವಿದ್ಯಾರ್ಥಿನಿ ಪಿ. ಮಹಿಮಾ ಕಾರಂತ ವಿಶೇಷ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು.

ವೇದಿಕೆಯಲ್ಲಿ ಮಾಜಿ ಸಚಿವ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್, ಸಾಹಿತ್ಯಿಕ-ಸಾಂಸ್ಕೃತಿಕ ಚಿಂತಕಿ ಪೂರ್ಣಿಮಾ ಸುರೇಶ್, ಕಾರಂತ ಪ್ರತಿಷ್ಠಾನ ಟ್ರಸ್ಟಿ ಸುಶೀಲ ಸೋಮಶೇಖರ್ ಉಪಸ್ಥಿತರಿದ್ದರು. ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಿಕ್ಷಕ ಸತೀಶ್ ವಡ್ಡರ್ಸೆ ವಂದಿಸಿದರು. ಅನಿತಾ ನರೇಂದ್ರ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!