Friday, September 20, 2024
Friday, September 20, 2024

ಬಾರ್ಕೂರು: ಗ್ರಂಥಾಲಯ ದಿನಾಚರಣೆ

ಬಾರ್ಕೂರು: ಗ್ರಂಥಾಲಯ ದಿನಾಚರಣೆ

Date:

ಬ್ರಹ್ಮಾವರ, ನ.30: ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಾಲಯ ದಿನಾಚರಣೆ ನಡೆಯಿತು. ಪ್ರಾಂಶುಪಾಲರಾದ ಪ್ರೊ. ರಮೇಶ್ ಆಚಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಣಿತಶಾಸ್ತ್ರ ವಿಭಾಗ ಮುಖ್ಯಸ್ಥ ಗಂಗಾಧರ ಡಿ ವಿಶೇಷ ಉಪನ್ಯಾಸ ನೀಡಿದರು. ಗ್ರಂಥಾಲಯದ ಪ್ರಾಮುಖ್ಯತೆಯ ಬಗ್ಗೆ ವಿಸ್ತ್ರತವಾಗಿ ಮಾತನಾಡಿದ ಅವರು, ಒಂದು ವ್ಯಕ್ತಿ ಉನ್ನತ ಮಟ್ಟಕ್ಕೆ ಹೋಗುವಲ್ಲಿ ಪ್ರತಿನಿತ್ಯದ ಓದು ಅವಶ್ಯಕ ಎಂದು ಸಾಧಕರಾದ ಬಿಲ್ ಗೇಟ್ಸ್, ವಾರನ್ ಬಫೆಟ್ಸ್, ಏಲಾನ್ ಮಸ್ಕ್ ರವರನ್ನು ಉಲ್ಲೇಖಿಸಿದರು.

ಗ್ರಂಥಪಾಲಕರಾದ ಹರೀಶ್ ಸಿ.ಕೆ ಅವರು ಗ್ರಂಥಾಲಯದ ಪಿತಾಮಹ ಪದ್ಮಶ್ರೀ ಡಾ. ಎಸ್.ಆರ್. ರಂಗನಾಥನ್ ಅವರ ಜೀವನ ಮತ್ತು ಸಾಧನೆಯ ಬಗ್ಗೆ ಮಾಹಿತಿ ನೀಡಿದರು. ಗ್ರಂಥಾಲಯ ಸಲಹಾ ಸಮಿತಿಯ ಸದಸ್ಯರಾದ ರಾಘವೇಂದ್ರ ಎಚ್.ಎಸ್., ಶ್ರುತಿ ಆಚಾರ್ಯ, ಗ್ರಂಥಾಲಯ ಸಹಾಯಕರಾದ ಮಂಜುನಾಥ್, ಗ್ರಂಥಾಲಯ ವಿದ್ಯಾರ್ಥಿ ಪ್ರತಿನಿಧಿಗಳಾದ ಉದಯ್ ಕುಮಾರ್, ಲಾವಣ್ಯ, ಪ್ರಸನ್ನ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!