Thursday, September 19, 2024
Thursday, September 19, 2024

ತೆಂಕನಿಡಿಯೂರು ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನ ವೇದಿಕೆ ಉದ್ಘಾಟನೆ

ತೆಂಕನಿಡಿಯೂರು ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನ ವೇದಿಕೆ ಉದ್ಘಾಟನೆ

Date:

ಉಡುಪಿ, ಡಿ.2: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ೨೦೨೩-೨೪ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನ ವೇದಿಕೆಯನ್ನು ಲಯನ್ಸ್ ಕ್ಲಬ್ ಅಮೃತ್ ಉಡುಪಿ ಇವರ ಸಹಯೋಗದಲ್ಲಿ ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ಉದ್ಘಾಟಿಸಲಾಯಿತು. ಶಾಸಕ ಯಶ್‌ಪಾಲ್ ಎ. ಸುವರ್ಣ ಉದ್ಘಾಟನೆ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಈಗಾಗಲೇ ಶಿಕ್ಷಣ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ಆಗಾಧ ಸಾಧನೆಯನ್ನು ಮಾಡಿ ದೇಶ-ವಿದೇಶಗಳಲ್ಲಿ ಛಾಪು ಮೂಡಿಸಿರುವ ಉಡುಪಿ ಜಿಲ್ಲೆ ಭಾರತೀಯ ನಾಗರೀಕ ಸೇವೆಯಂತಹ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ನಮ್ಮ ಜಿಲ್ಲೆಯ ಪ್ರತಿಭಾನ್ವಿತ ಯುವಜನತೆ ಆಸಕ್ತಿ ವಹಿಸಬೇಕಾಗಿದೆ. ಇದಕ್ಕೆ ಬೇಕಾದ ಸಕಲ
ಪ್ರೋತ್ಸಾಹವನ್ನು ನೀಡುವ ಭರವಸೆಯನ್ನು ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋಪಾಲಕೃಷ್ಣ ಎಂ ಗಾಂವಕರ್, ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಉದ್ಯೋಗ ಮಾರುಕಟ್ಟೆಯಲ್ಲಿ ಯಶಸ್ಸು ಗಳಿಸಲು ಬೇಕಾದ ಕೌಶಲಗಳನ್ನು ವಿದ್ಯಾರ್ಥಿಗಳು ಬೆಳಸಿಕೊಳ್ಳಬೇಕೆಂದು ಸಲಹೆಯಿತ್ತರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಉಡುಪಿ ಅಮೃತ್ ಅಧ್ಯಕ್ಷರಾದ ಭಾರತಿ ಹೆಚ್.ಎಸ್., ಉದ್ಯಮಿಗಳಾದ ಎಂ.ಸಿ ಚಂದ್ರಶೇಖರ್ ಶುಭ ಹಾರೈಸಿದರು. ಪ್ರಾಂಶುಪಾಲರಾದ ಪ್ರೊ.ಸುರೇಶ್ ರೈ.ಕೆ ಕಳೆದ ಮೂರು ದಶಕಗಳಲ್ಲಿ ತೆಂಕನಿಡಿಯೂರು ಕಾಲೇಜು ಬೆಳೆದು ಬಂದ ಹಾದಿಯನ್ನು ಶೈಕ್ಷಣಿಕ, ಕ್ರೀಡೆ, ಹಾಗೂ ಸಾಂಸ್ಕೃತಿಕ ಕ್ಷೇತ್ರಗಳ ಸಾಧನೆಯನ್ನು ಸ್ಥೂಲವಾಗಿ ಪರಿಚಯಿಸಿ ಅತಿಥಿಗಳನ್ನು ಸ್ವಾಗತಿಸಿದರು.

ಶೈಕ್ಷಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಾಧಕೃಷ್ಣ, ಡಾ. ರಾಘವ ನಾಯ್ಕ್ , ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಕೃಷ್ಣ ಸಾಸ್ತಾನ, ರತ್ನಮಾಲಾ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ವಿದ್ಯಾರ್ಥಿ ಪ್ರತಿನಿಧಿಗಳಾದ ನಿಶಾ, ಸುಪ್ರೀತಾ, ಯಶೋಧ, ನಿಸಾರ್ ಅಹಮ್ಮದ್, ಸಂಧ್ಯಾ, ಅಭಿಷೇಕ್ ಮುಂತಾದವರು ಉಪಸ್ಥಿತರಿದ್ದರು. ನಿಶಾ ವಂದಿಸಿದರು. ಸಮಾಜಕಾರ್ಯ ಸ್ನಾತಕೋತ್ತರ ವಿಭಾಗ ಮುಖ್ಯಸ್ಥ ಡಾ. ದುಗ್ಗಪ್ಪ ಕಜೆಕಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!