Saturday, October 19, 2024
Saturday, October 19, 2024

ಪುತ್ತಿಗೆ ಪರ್ಯಾಯ: ಹೊರೆಕಾಣಿಕೆ ಸಭೆ

ಪುತ್ತಿಗೆ ಪರ್ಯಾಯ: ಹೊರೆಕಾಣಿಕೆ ಸಭೆ

Date:

ಉಡುಪಿ, ಜ.5: ಪುತ್ತಿಗೆ ಪರ್ಯಾಯ ಮಹೋತ್ಸವಕ್ಕೆ ಕನರ್ಪಾಡಿ ಜಯದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಸಮರ್ಪಿಸುವ ಬಗ್ಗೆ ಸಮಾಲೋಚನಾ ಸಭೆ ನಡೆಯಿತು. ಪರ್ಯಾಯ ಹೊರೆಕಾಣಿಕೆಯ ಸಂಚಾಲಕರಾದ ಬೈಕಾಡಿ ಸುಪ್ರಸಾದ ಶೆಟ್ಟಿ ಮಾತನಾಡಿ ಹೊರೆಕಾಣಿಕೆಯ ವಿವರಗಳನ್ನು ತಿಳಿಸಿ ಈ ಬಾರಿಯ ವಿಶ್ವ ಪರ್ಯಾಯಕ್ಕೆ ಲಕ್ಷಾಂತರ ಭಕ್ತರು ಉಡುಪಿಗೆ ಆಗಮಿಸಲಿದ್ದು, ಅನ್ನದಾನಕ್ಕಾಗಿ ಬ್ರಹತ್ ಹೊರೆಕಾಣಿಕೆ ವ್ಯವಸ್ಥೆ ಆಯೋಜಿಸಬೇಕೆಂದು ವಿನಂತಿಸಿದರು.

ಗಂಗಾಧರ್ ರಾವ್ ಮಾತನಾಡಿ, ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿ ಹೊರೆಕಾಣಿಕೆಯ ಮೆರವಣಿಗೆಯು ವ್ಯವಸ್ಥಿತವಾಗಿ ಸಾಗಬೇಕೆಂದು ವಿನಂತಿಸಿದರು. ಜಯಪ್ರಕಾಶ ಕೆದ್ಲಾಯ, ಊರ ಸುತ್ತಮುತ್ತಲಿನ ಜನರ ಸಹಕಾರ ಕೋರಿದರು. ದೇವಸ್ಥಾನದ ಮುಖ್ಯಸ್ಥರಾದ ರಾಘವೇಂದ್ರ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸ್ವಾಗತ ಸಮಿತಿಯ ರವೀಂದ್ರ ಆಚಾರ್ಯ, ರಘುಪತಿ ರಾವ್ ಮುಂತಾದವರು ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!