Friday, October 18, 2024
Friday, October 18, 2024

ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ಧಿ ನೀಡಿದ ರಾಜ್ಯ ಸರ್ಕಾರ

ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ಧಿ ನೀಡಿದ ರಾಜ್ಯ ಸರ್ಕಾರ

Date:

ಬೆಂಗಳೂರು, ಜ.6: ಮುಖ್ಯಮಂತ್ರಿ ಸಿದ್ಧರಾಮಯ್ಯರವರ ಅಧ್ಯಕ್ಷತೆಯಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ.ಸುಧಾಕರ್ ಮತ್ತು‌ ಮಾಜಿ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣನವರ ನೇತೃತ್ವದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಶನಿವಾರ ಸಭೆ ನಡೆಯಿತು. ಈ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು ವೇತನ ಹೆಚ್ಚಳ ಮಾಡಲಾಗಿದೆ.

ಪ್ರಮುಖ ನಿರ್ಣಯಗಳು: ಸೇವಾನುಭವದ ಆಧಾರದಲ್ಲಿ ಅತಿಥಿ ಉಪನ್ಯಾಸಕರ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡುವ ಜೊತೆಗೆ ಕೆಲವು ಹೊಸ ಸೌಲಭ್ಯಗಳನ್ನು ನೀಡಲಾಗುವುದು. ಈ ಹಿಂದೆ ಮಾಸಿಕ 32,000 (ಯುಜಿಸಿ ಅರ್ಹತೆಯನ್ನು ಹೊಂದಿರುವ ನೆಟ್/ಕೆ.ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಜತೆಗೆ 5 ವರ್ಷಕ್ಕಿಂತ ಹೆಚ್ಚು ಅನುಭವ ಹೊಂದಿದ) ಮಾಸಿಕ ವೇತನ ಪಡೆಯುತ್ತಿದ್ದ ಉಪನ್ಯಾಸಕರು ಸೇವಾನುಭವದ ಅನುಗುಣವಾಗಿ ಇನ್ನು ಮುಂದೆ ರೂ. 40,000 ಪಡೆಯಲಿದ್ದಾರೆ. ಅದೇ ರೀತಿ ಮಾಸಿಕ 30,000 (ಯುಜಿಸಿ ಅರ್ಹತೆಯನ್ನು ಹೊಂದಿರುವ ನೆಟ್/ಕೆ.ಸೆಟ್) ಮತ್ತು ಐದು ವರ್ಷಕ್ಕಿಂತ ಕಡಿಮೆ ಅನುಭವ ಹೊಂದಿದವರ ಮಾಸಿಕ ವೇತನದಲ್ಲಿ ರೂ. 5 ಸಾವಿರ ಹೆಚ್ಚಳ, ಈ ಹಿಂದೆ ರೂ. ಮಾಸಿಕ ರೂ. 28,000 ಪಡೆಯುತ್ತಿದ್ದ (ನೆಟ್/ಕೆ.ಸೆಟ್ ಆಗದ, 5 ವರ್ಷಕ್ಕಿಂತ ಹೆಚ್ಚು ಸೇವಾನುಭವ ಹೊಂದಿದ) ಉಪನ್ಯಾಸಕರಿಗೆ 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ. ಹೆಚ್ಚಳ, 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಹೆಚ್ಚಳ ಮಾಡಲಾಗಿದೆ. ಈ ಹಿಂದೆ ರೂ. 26,000 ಪಡೆಯುತ್ತಿದ್ದವರಿಗೆ (ನೆಟ್/ಕೆ.ಸೆಟ್ ಆಗದ 5 ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದ) ಉಪನ್ಯಾಸಕರಿಗೆ ರೂ. 5 ಸಾವಿರ ಹೆಚ್ಚಳ ಮಾಡಲಾಗಿದೆ.

ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಸೇವೆ ಸಲ್ಲಿಸಿ 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಟು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲಾಗುವುದು. ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರ ಸೇವಾನುಭವ ಆಧರಿಸಿ, ವೆಯ್ಟೇಜ್‌ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಸರಳೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!